ಸಂಗ್ರಹ ಚಿತ್ರ 
ದೇಶ

ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ: ಯುವಕ ಸಾವು, ಸಾವಿನ ಸಂಖ್ಯೆ 66ಕ್ಕೆ ಏರಿಕೆ

ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಮುಂದುವರೆದಿದ್ದು, ಪುಲ್ವಾಮ ಜಿಲ್ಲೆಯಲ್ಲಿ ಬುಧವಾರ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಮೃತಪಟ್ಟಿರುವುದಾಗಿ ವರದಿಗಳು...

ಶ್ರೀನಗರ: ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಮುಂದುವರೆದಿದ್ದು, ಪುಲ್ವಾಮ ಜಿಲ್ಲೆಯಲ್ಲಿ ಬುಧವಾರ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಮೃತಪಟ್ಟಿರುವುದಾಗಿ ವರದಿಗಳು ತಿಳಿಸಿವೆ.

ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿ ಅವಲೋಕನಕ್ಕಾಗಿ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಇಂದು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಇದರ ಬೆನ್ನಲ್ಲೇ ಪುಲ್ವಾಮ ಜಿಲ್ಲೆಯಲ್ಲಿ ಘರ್ಷಣೆ ಆರಂಭವಾಗಿದ್ದು, ನೂರಕ್ಕೂ ಹೆಚ್ಚು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಲು ಆರಂಭಿಸಿದ್ದಾರೆ. ಪ್ರತಿಭಟನೆ ವೇಳೆ ಘರ್ಷಣೆಯುಂಟಾದ ಪರಿಣಾಮ ಓರ್ವ ಯುವಕ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ. ಇದರಂತೆ ಕಾಶ್ಮೀರ ಹಿಂಸಾಚಾರದಲ್ಲಿ ಸಾವಿನ ಸಂಖ್ಯೆ 66ಕ್ಕೆ ಏರಿಕೆಯಾಗಿದೆ.

ಆಮಿರ್ ಬಶಿರ್ ಮೃತ ಯುವಕ ಎಂದು ಗುರ್ತಿಸಲಾಗಿದೆ. ಘರ್ಷಣೆ ವೇಳೆ ಆಮಿರ್ ಎದೆಯ ಭಾಗದಲ್ಲಿ ಗಂಭೀರವಾಗಿ ಗಾಯವಾಗಿತ್ತು. ಕೂಡಲೇ ಪೊಲೀಸರು ಆತನನ್ನು ಎಸ್ಎಂಹೆಚ್ ಎಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತ ಯುವಕ ಪುಲ್ವಾಮ ಜಿಲ್ಲೆಯ ಪೊಹು ಗ್ರಾಮದವನಾಗಿದ್ದಾನೆ. ಇಂದು ಬೆಳಿಗ್ಗೆ ಇದೇ ಸ್ಥಳದಲ್ಲಿ ಸೇನೆ ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ ಏರ್ಪಟ್ಟಿತ್ತು. ಘಟನೆ ವೇಳೆ ಹಲವರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT