ದೇಶ

ಆ.27-28ರಂದು ರಾಜ್ಯಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭೇಟಿ

Manjula VN

ನವದೆಹಲಿ: ಆ.27 ರಿಂದ 28 ರವರೆಗೆ ರಾಜ್ಯಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಅಧಿಕೃತವಾಗಿ ಭೇಟಿ ನೀಡಲಿದ್ದಾರೆಂದು ಗುರುವಾರ ಮೂಲಗಳು ತಿಳಿಸಿವೆ.

ಎರಡು ದಿನಗಳ ಕಾಲ ಪ್ರಣಬ್ ಮುಖರ್ಜಿಯವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಅಂದು ನಗರದಲ್ಲಿ ನಡೆಯಲಿರುವ ಎರಡು ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆಂದು ಹೇಳಲಾಗುತ್ತಿದೆ.

ಆ.27 ರಂದು ನಡೆಯಲಿರುವ ಇಸ್ಕಾನ್ ನ ಅಕ್ಷಯ ಪಾತ್ರೆ ಯೋಜನೆಯ 15ನೇ ವರ್ಷಾಚರಣೆ ಹಾಗೂ ಆ.28 ರಂದು ನಡೆಯಲಿರುವ ನ್ಯಾಷನಲ್ ಲಾ ಸ್ಕೂಲ್ ನ ಘಟಿಕೋತ್ಸವ ಕಾರ್ಯಕ್ರಮಗಳಲ್ಲಿ ರಾಷ್ಟ್ರಪತಿಯವರು ಭಾಗಿಯಾಗಲಿದ್ದಾರೆಂದು ತಿಳಿದುಬಂದಿದೆ.

SCROLL FOR NEXT