ಸುಪ್ರೀಂ ಕೋರ್ಟ್ 
ದೇಶ

ಹಿಂದೂ ಮಹಾಸಭಾ ನಾಯಕನ ಅರ್ಜಿಯನ್ನು 4 ವಾರಗಳಲ್ಲಿ ಇತ್ಯರ್ಥಗೊಳಿಸಲು ಅಲಹಾಬಾದ್ ಕೋರ್ಟ್ ಗೆ ಸೂಚನೆ

ತಮ್ಮ ವಿರುದ್ಧದ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದನ್ನು ಪ್ರಶ್ನಿಸಿ ಹಿಂದೂ ಮಹಾಸಭಾದ ನಾಯಕ ಕಮಲೇಶ್ ತಿವಾರಿ ಸಲ್ಲಿಸಿದ್ದ ಅರ್ಜಿಯನ್ನು ನಾಲ್ಕು ವಾರಗಳಲ್ಲಿ ಇತ್ಯರ್ಥಗೊಳಿ..

ನವದೆಹಲಿ: ತಮ್ಮ ವಿರುದ್ಧದ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದನ್ನು ಪ್ರಶ್ನಿಸಿ ಹಿಂದೂ ಮಹಾಸಭಾದ ನಾಯಕ ಕಮಲೇಶ್ ತಿವಾರಿ ಸಲ್ಲಿಸಿದ್ದ ಅರ್ಜಿಯನ್ನು ನಾಲ್ಕು ವಾರಗಳಲ್ಲಿ ಇತ್ಯರ್ಥಗೊಳಿಸುವಂತೆ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಗೆ ಸೂಚನೆ ನೀಡಿದೆ.

ಪ್ರವಾದಿ ಮೊಹಮ್ಮದ್ ಅವರನ್ನು ಮೊದಲ ಸಲಿಂಗಕಾಮಿ ಎಂದು ಹೇಳಿದ್ದ ಹಿನ್ನೆಲೆಯಲ್ಲಿ ಹಿಂದೂ ಮಹಾಸಭಾದ ನಾಯಕ ಕಮಲೇಶ್ ತಿವಾರಿ ಅವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಆರ್ ಎಸ್ ಎಸ್ ನಾಯಕರು ಸಲಿಂಗಕಾಮಿಗಳು, ಆದ್ದರಿಂದ ಅವರು ವಿವಾಹವಾಗುವುದಿಲ್ಲ ಎಂದು ಹೇಳಿಕೆ ನೀಡಿದ್ದ ಬೆನ್ನಲ್ಲೇ ಹಿಂದೂ ಮಹಾಸಭಾದ ನಾಯಕ ಕಮಲೇಶ್ ತಿವಾರಿ, ಪ್ರವಾದಿ ಮೊಹಮ್ಮದ್ ಮೊದಲ ಸಲಿಂಗಕಾಮಿ ಎಂದು ಹೇಳಿಕೆ ನೀಡಿದ್ದರು.

ಸೆಕ್ಷನ್ 377 ರ ವಿರುದ್ಧ ಮಾತನಾಡಿ, ಸಲಿಂಗಕಾಮದ ಬಗ್ಗೆ ನೀಡಲಾಗಿರುವ ತೀರ್ಪನ್ನು ಸುಪ್ರೀಂ ಕೋರ್ಟ್ ಮರುಪರಿಶೀಲನೆ ನಡೆಸಬೇಕು ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿದ್ದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಸಚಿವ ಆಜಂ ಖಾನ್ ಆರ್ ಎಸ್ ಎಸ್ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಆಜಂ ಖಾನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರವಾದಿ ಮೊಹಮ್ಮದ್ ರನ್ನು ಮೊದಲ ಸಲಿಂಗಕಾಮಿ ಎಂದಿದ್ದ ಕಮಲೇಶ್ ತಿವಾರಿಯನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT