ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿಯವರ ಅಳಿಯ ರಾಬರ್ಟ್ ವಾದ್ರಾ (ಸಂಗ್ರಹ ಚಿತ್ರ) 
ದೇಶ

ಸತ್ತ ಕುದುರೆ ಮಾತನಾಡದಿರಬಹುದು ಆದರೆ, ನಾನು ಮಾತನಾಡುತ್ತೇನೆ: ಬಿಜೆಪಿ ಶಾಸಕನಿಗೆ ರಾಬರ್ಟ್

ಪೊಲೀಸ್ ಕುದುರೆ ಶಕ್ತಿಮಾನ್‌ ಸಾವು ಪ್ರಕರಣ ಕುರಿತಂತೆ ಬಿಜೆಪಿ ಶಾಸಕ ಗಣೇಶ್ ಜೋಶಿ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿಯವರ ಅಳಿಯ ರಾಬರ್ಟ್ ವಾದ್ರಾ ನಡುವೆ...

ವಾದ್ರಾ: ಪೊಲೀಸ್ ಕುದುರೆ ಶಕ್ತಿಮಾನ್‌ ಸಾವು ಪ್ರಕರಣ ಕುರಿತಂತೆ ಬಿಜೆಪಿ ಶಾಸಕ ಗಣೇಶ್ ಜೋಶಿ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿಯವರ ಅಳಿಯ ರಾಬರ್ಟ್ ವಾದ್ರಾ ನಡುವೆ ವಿಮಾನ ನಿಲ್ದಾಣವೊಂದರಲ್ಲಿ ಭಾನುವಾರ ಮಾತಿನ ಚಕಮಕಿ ನಡೆದಿದೆ.

ಪೊಲೀಸ್ ಕುದುರೆ ಶಕ್ತಿಮಾನ್‌ಗೆ ಹೊಡೆದು ಅದರ ಕಾಲು ಮುರಿದು, ಸಾವಿಗೆ ಕಾರಣರಾಗಿದ್ದ ಬಿಜೆಪಿ ಶಾಸಕ ಗಣೇಶ್ ಜೋಷಿಯವರು, ಕೆಲ ಬಿಜೆಪಿ ಸಂಸದರನ್ನು ಸ್ವಾಗತಿಸುವ ಸಲುವಾಗಿ ಡೆಹ್ರಾಡೂನ್ ನ ವಿಮಾನ ನಿಲ್ದಾಣಕ್ಕೆ ಹೋಗಿದ್ದಾರೆ.

ರಾಬರ್ಟ್ ವಾದ್ರಾ ಕೂಡ ಅದೇ ವಿಮಾನ ನಿಲ್ದಾಣದಲ್ಲಿ ಹಾಜರಿದ್ದರು. ಈ ವೇಳೆ ಶಕ್ತಿಮಾನ್ ಕುರಿತಂತೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.

ಈ ಕುರಿತಂತೆ ಮಾತನಾಡಿರುವ ವಾದ್ರಾ ಅವರು, ವಿಮಾನ ನಿಲ್ದಾಣದಲ್ಲಿ ಜೋಷಿಯವರು ಬಿಜೆಪಿ ಸಂಸದರನ್ನು ಸ್ವಾಗತಿಸುತ್ತಿದ್ದರು. ಈ ವೇಳೆ ಶಕ್ತಿಮಾನ್ ಸಾವು ಕುರಿತಂತೆ ನನಗನ್ನಿಸಿದ್ದನ್ನು ನಾನು ಅವರಿಗೆ ಹೇಳಿದೆ. ನಂತರ ಇದ್ದಕ್ಕಿದ್ದಂತೆ ನನ್ನ ಮೇಲೆ ಕೂಗಾಡಲು, ಕಿರುಚಾಡಲು ಆರಂಭಿಸಿದರು. ಅಲ್ಲದೆ, ಬೆದರಿಕೆಗಳನ್ನು ಹಾಕಿದರು. ಸತ್ತ ಕುದುರೆ ಮಾತನಾಡದಿರಬಹುದು, ಆದರೆ ನಾನು ಮಾತನಾಡುತ್ತೇನೆಂದು ಅವರಿಗೆ ಹೇಳಿದೆ.

ಕೂಗಾಡುತ್ತಿದ್ದ ಕಾರಣ ಬಿಜೆಪಿ ಶಾಸಕ ಹಾಗೂ ಅವರ ಜೊತೆಗಿದ್ದ ಗೂಂಡಾಗಳನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಹೊರ ಹಾಕಿದರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT