ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿಯವರ ಅಳಿಯ ರಾಬರ್ಟ್ ವಾದ್ರಾ (ಸಂಗ್ರಹ ಚಿತ್ರ) 
ದೇಶ

ಸತ್ತ ಕುದುರೆ ಮಾತನಾಡದಿರಬಹುದು ಆದರೆ, ನಾನು ಮಾತನಾಡುತ್ತೇನೆ: ಬಿಜೆಪಿ ಶಾಸಕನಿಗೆ ರಾಬರ್ಟ್

ಪೊಲೀಸ್ ಕುದುರೆ ಶಕ್ತಿಮಾನ್‌ ಸಾವು ಪ್ರಕರಣ ಕುರಿತಂತೆ ಬಿಜೆಪಿ ಶಾಸಕ ಗಣೇಶ್ ಜೋಶಿ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿಯವರ ಅಳಿಯ ರಾಬರ್ಟ್ ವಾದ್ರಾ ನಡುವೆ...

ವಾದ್ರಾ: ಪೊಲೀಸ್ ಕುದುರೆ ಶಕ್ತಿಮಾನ್‌ ಸಾವು ಪ್ರಕರಣ ಕುರಿತಂತೆ ಬಿಜೆಪಿ ಶಾಸಕ ಗಣೇಶ್ ಜೋಶಿ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿಯವರ ಅಳಿಯ ರಾಬರ್ಟ್ ವಾದ್ರಾ ನಡುವೆ ವಿಮಾನ ನಿಲ್ದಾಣವೊಂದರಲ್ಲಿ ಭಾನುವಾರ ಮಾತಿನ ಚಕಮಕಿ ನಡೆದಿದೆ.

ಪೊಲೀಸ್ ಕುದುರೆ ಶಕ್ತಿಮಾನ್‌ಗೆ ಹೊಡೆದು ಅದರ ಕಾಲು ಮುರಿದು, ಸಾವಿಗೆ ಕಾರಣರಾಗಿದ್ದ ಬಿಜೆಪಿ ಶಾಸಕ ಗಣೇಶ್ ಜೋಷಿಯವರು, ಕೆಲ ಬಿಜೆಪಿ ಸಂಸದರನ್ನು ಸ್ವಾಗತಿಸುವ ಸಲುವಾಗಿ ಡೆಹ್ರಾಡೂನ್ ನ ವಿಮಾನ ನಿಲ್ದಾಣಕ್ಕೆ ಹೋಗಿದ್ದಾರೆ.

ರಾಬರ್ಟ್ ವಾದ್ರಾ ಕೂಡ ಅದೇ ವಿಮಾನ ನಿಲ್ದಾಣದಲ್ಲಿ ಹಾಜರಿದ್ದರು. ಈ ವೇಳೆ ಶಕ್ತಿಮಾನ್ ಕುರಿತಂತೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.

ಈ ಕುರಿತಂತೆ ಮಾತನಾಡಿರುವ ವಾದ್ರಾ ಅವರು, ವಿಮಾನ ನಿಲ್ದಾಣದಲ್ಲಿ ಜೋಷಿಯವರು ಬಿಜೆಪಿ ಸಂಸದರನ್ನು ಸ್ವಾಗತಿಸುತ್ತಿದ್ದರು. ಈ ವೇಳೆ ಶಕ್ತಿಮಾನ್ ಸಾವು ಕುರಿತಂತೆ ನನಗನ್ನಿಸಿದ್ದನ್ನು ನಾನು ಅವರಿಗೆ ಹೇಳಿದೆ. ನಂತರ ಇದ್ದಕ್ಕಿದ್ದಂತೆ ನನ್ನ ಮೇಲೆ ಕೂಗಾಡಲು, ಕಿರುಚಾಡಲು ಆರಂಭಿಸಿದರು. ಅಲ್ಲದೆ, ಬೆದರಿಕೆಗಳನ್ನು ಹಾಕಿದರು. ಸತ್ತ ಕುದುರೆ ಮಾತನಾಡದಿರಬಹುದು, ಆದರೆ ನಾನು ಮಾತನಾಡುತ್ತೇನೆಂದು ಅವರಿಗೆ ಹೇಳಿದೆ.

ಕೂಗಾಡುತ್ತಿದ್ದ ಕಾರಣ ಬಿಜೆಪಿ ಶಾಸಕ ಹಾಗೂ ಅವರ ಜೊತೆಗಿದ್ದ ಗೂಂಡಾಗಳನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಹೊರ ಹಾಕಿದರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT