ಕಾಶ್ಮೀರ ಗಲಭೆ 
ದೇಶ

ಕಾಶ್ಮೀರದಲ್ಲಿ ಯುವಕರನ್ನು ಪ್ರಚೋದಿಸುತ್ತಿರುವವರು ಅವರ ಮಕ್ಕಳನ್ನು ಸುರಕ್ಷಿತವಾಗಿರಿಸಿದ್ದಾರೆ: ಸಚಿವ ಜಿತೇಂದ್ರ ಸಿಂಗ್

ದೇಶದ ಅಸ್ಮಿತೆಗೆ ಧಕ್ಕೆ ಉಂಟುಮಾಡುತ್ತಿರುವವರ ಬಗ್ಗೆ ಕಾಶ್ಮೀರದ ಯುವ ಜನತೆಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ನವದೆಹಲಿ: ದೇಶದ ಅಸ್ಮಿತೆಗೆ ಧಕ್ಕೆ ಉಂಟುಮಾಡುತ್ತಿರುವವರ ಬಗ್ಗೆ ಕಾಶ್ಮೀರದ ಯುವ ಜನತೆಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಕಾಶ್ಮೀರದಲ್ಲಿ ಗಲಭೆ, ಜಿಹಾದ್ ಗೆ ಯುವಕರನ್ನು ಪ್ರಚೋದಿಸುತ್ತಿರುವವರು ತಮ್ಮ ಮಕ್ಕಳನ್ನು ಮಾತ್ರ ಸುರಕ್ಷಿತವಾಗಿ ಬೆಳೆಸುತ್ತಿದ್ದಾರೆ. ಆದರೆ ಪ್ರಚೋದನೆಗೊಳಗಾಗಿ ಕಲ್ಲು ತೂರಾಟ ಮಾಡುತ್ತಿರುವ ಬಡತನದ ಹಿನ್ನೆಲೆಯುಳ್ಳವರು ಮಾತ್ರ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಜಿತೇಂದ್ರ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ವರ್ಗದ ಹೆಸರಿನಲ್ಲಿ ಕಾಶ್ಮೀರ ಯುವಕರನ್ನು ಭಯೋತ್ಪಾದನೆಗೆ ಪ್ರಚೋದಿಸುತ್ತಿರುವವರು ಯಾಕೆ ತಮ್ಮ ಮಕ್ಕಳನ್ನು ಜನ್ನತ್( ಸ್ವರ್ಗ)ಕ್ಕೆ ಕಲಿಸಲು ಇಚ್ಛಿಸುವುದಿಲ್ಲ ಎಂದು ಜಿತೇಂದ್ರ ಸಿಂಗ್ ಪ್ರಶ್ನಿಸಿದ್ದು, ಭಯೋತ್ಪಾದನೆ ವಿಷಯದಲ್ಲಿ  ಕೇಂದ್ರ ಸರ್ಕಾರ ರಾಜಿಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ. ಅಮಾಯಕ ನಾಗರಿಕರ ರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಭಯೋತ್ಪಾದನೆ ವಿರುದ್ಧದ ಕಾರ್ಯಾಚರಣೆ ನಡೆಸಲಾಗುವುದು ಎಂದು ಜಿತೇಂದ್ರ ಸಿಂಗ್ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT