ಉತ್ತರ ಪ್ರದೇಶ ಸಚಿವ ಅಜಂಖಾನ್ 
ದೇಶ

ಬುಲಂದ್ ಶೆಹರ್ ಅತ್ಯಾಚಾರ ಕುರಿತ ಅಜಂಖಾನ್ ಹೇಳಿಕೆ ಆಕ್ಷೇಪಾರ್ಹವಾದದ್ದು: ಸುಪ್ರೀಂ

ಬುಲಂದ್ ಶೆಹರ್ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ನಾಯಕ ಅಜಂಖಾನ್ ಅವರು ನೀಡಿದ್ದ ಹೇಳಿಕೆ ಅಕ್ಷೇಪಾರ್ಹ ಹಾಗೂ ಅಸಂವೇದಿ...

ನವದೆಹಲಿ: ಬುಲಂದ್ ಶೆಹರ್ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಉತ್ತರ ಪ್ರದೇಶ ಸಚಿವ ಅಜಂಖಾನ್ ಅವರು ನೀಡಿದ್ದ ಹೇಳಿಕೆ ಅಕ್ಷೇಪಾರ್ಹ ಹಾಗೂ ಅಸಂವೇದಿ ಹೇಳಿಕೆಯಾಗಿದೆ ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ.

ಕೆಲ ದಿನಗಳ ಹಿಂದಷ್ಟೇ ಬುಲಂದ್ ಶೆಹರ್ ನಲ್ಲಿ ತಾಯಿ ಹಾಗೂ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೊಂದು ನಡೆದಿತ್ತು. ಪ್ರಕರಣ ಕುರಿತಂತೆ ಬೇಜವಾಬ್ದಾರಿಯುತವಾಗಿ ಮಾತನಾಡಿದ್ದ ಅಜಂಖಾನ್ ಅವರು, ಚುನಾವಣೆ ಹತ್ತಿರವಿದ್ದು, ಸಾಮೂಹಿಕ ಅತ್ಯಾಚಾರ ಪ್ರಕರಣವೊಂದು ವಿರೋಧ ಪಕ್ಷಗಳ ರಾಜಕೀಯ ಪಿತೂರಿಯಾಗಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಹಲವು ರಾಜಕೀಯ ನಾಯಕರು ವಿರೋಧ ವ್ಯಕ್ತಪಡಿಸಿದ್ದರು.

ಅಜಂಖಾನ್ ಅವರ ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಅತ್ಯಾಚಾರ ಸಂತ್ರಸ್ತರ ಕುಟುಂಬಸ್ಥರು ಸುಪ್ರೀಂ ಮೆಟ್ಟಿಲೇರಿದ್ದರು.

ಇದರಂತೆ ಇಂದು ಅರ್ಜಿಯನ್ನು ವಿಚಾರಣೆ ನಡೆಸಿರುವ ಸುಪ್ರೀಂ, ಸಾಮೂಹಿಕ ಅತ್ಯಾಚಾರ ಕುರಿತಂತೆ ಅಜಂಖಾನ್ ಅವರು ನೀಡಿರುವ ಹೇಳಿಕೆ ಆಕ್ಷೇಪಾರ್ಹವಾದದ್ದು ಮತ್ತು ಅಸಂವೇದಿಯುತ ಹೇಳಿಕೆಯಾಗಿದೆ ಎಂದು ಹೇಳಿದೆ.

ಅಧಿಕಾರದಲ್ಲಿರುವ ನಾಯಕರು ಈ ರೀತಿಯ ಬೇಜವಾಬ್ದಾರಿಯುತ ಹೇಳಿಕೆಯನ್ನು ನೀಡುವುದಾದರೂ ಹೇಗೆ? ಈ ರೀತಿಯ ಹೇಳಿಕೆಗಳು ನ್ಯಾಯಾಂಗ ಸಂಸ್ಥೆಯ ಮೇಲೆ ಜನರಿಗಿರುವ ನಂಬಿಕೆಯನ್ನು ಕುಗ್ಗಿಸುತ್ತದೆ. ಈ ರೀತಿಯ ಹೇಳಿಕೆಗಳನ್ನು ಅಭಿವ್ಯಕ್ತಿ ಸ್ವಾತಂತ್ರ್ಯವೆಂದು ಕರೆಯಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದೆ.

ಅಲ್ಲದೆ, ವಿವಾದಾತ್ಮಕವಾಗಿ ಹೇಳಿಕೆ ನೀಡುತ್ತಿರುವ ಈ ರೀತಿಯ ನಾಯಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನೇಕೆ ದಾಖಲಿಸುತ್ತಿಲ್ಲ ಎಂದು ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ, ನೋಟಿಸ್ ನಲ್ಲಿ  ಶೀಘ್ರಗತಿಯಲ್ಲಿ ಸ್ಪಷ್ಟನೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿನೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT