ಹಿಂಸಾಚಾರ ಪೀಡಿತ ಕಾಶ್ಮೀರ (ಸಂಗ್ರಹ ಚಿತ್ರ) 
ದೇಶ

ಸತತ 52 ದಿನಗಳ ಬಳಿಕ ಕಾಶ್ಮೀರದ ಹಲವೆಡೆ ಕರ್ಫ್ಯೂ ಹಿಂತೆಗೆತ

ಉಗ್ರ ಬುರ್ಹಾನ್ ವಾನಿ ಹತ್ಯೆ ಬಳಿಕ ಕಾಶ್ಮೀರದಲ್ಲಿ ಭುಗಿಲೆದ್ದಿದ್ದ ಹಿಂಸಾಚಾರ ಮತ್ತು ನಿಷೇಧಾಜ್ಞೆ ಹೇರಿಕೆ ಸತತ 52ನೇ ದಿನಕ್ಕೆ ಕಾಲಿಟ್ಟಿರುವಂತೆಯೇ ರಾಜಧಾನಿ ಶ್ರೀನಗರ ಸೇರಿದಂತೆ ಕಾಶ್ಮೀರದ ಹಲವೆಡೆ ಕರ್ಫ್ಯೂ ತೆರವುಗೊಳಿಸಲಾಗಿದೆ.

ಶ್ರೀನಗರ: ಉಗ್ರ ಬುರ್ಹಾನ್ ವಾನಿ ಹತ್ಯೆ ಬಳಿಕ ಕಾಶ್ಮೀರದಲ್ಲಿ ಭುಗಿಲೆದ್ದಿದ್ದ ಹಿಂಸಾಚಾರ ಮತ್ತು ನಿಷೇಧಾಜ್ಞೆ ಹೇರಿಕೆ ಸತತ 52ನೇ ದಿನಕ್ಕೆ ಕಾಲಿಟ್ಟಿರುವಂತೆಯೇ ರಾಜಧಾನಿ ಶ್ರೀನಗರ  ಸೇರಿದಂತೆ ಕಾಶ್ಮೀರದ  ಹಲವೆಡೆ ಕರ್ಫ್ಯೂ ತೆರವುಗೊಳಿಸಲಾಗಿದೆ.

ಪುಲ್ವಾಮದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಈ ಹಿನ್ನಲೆಯಲ್ಲಿ ಅಲ್ಲಿ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಪುಲ್ವಾಮಾ ಹಾಗೂ ಶ್ರೀನಗರದ ಹಲವೆಡೆ 144 ಸೆಕ್ಷನ್ ಮುಂದುವರೆಸಲಾಗಿದ್ದು, 10  ಮಂದಿ ಒಟ್ಟಿಗೆ ಸೇರುವುದನ್ನು ನಿಷೇಧಿಸಲಾಗಿದೆ. ಹಿಜ್ಬುಲ್ ಸಂಘಟನೆ ಕಮಾಂಡರ್ ಉಗ್ರ ಬುರ್ಹಾನ್ ವಾನಿ ಎನ್ ಕೌಂಟರ್ ಬಳಿಕ ಭುಗಿಲೆದ್ದಿದ್ದ ಹಿಂಸಾಚಾರದಲ್ಲಿ ಈ ವರೆಗೂ 70 ಮಂದಿ  ಸಾವಿಗೀಡಾಗಿ 11 ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಕಳೆದ ವಾರವಷ್ಟೇ ಶ್ರೀನಗರ ಸೇರಿದಂತೆ ಕಾಶ್ಮೀರದ ಬಟಮಲೂ, ಮೈಸುಮಾ ಮತ್ತು ಕ್ರಾಲ್ಕುಡ್ ಪಟ್ಟಣಗಳಲ್ಲಿ ಹೇರಲಾಗಿದ್ದ ಕರ್ಫ್ಯೂವನ್ನು ತೆರವುಗೊಳಿಸಲಾಗಿತ್ತು. ಈ ಮೂರು ಪಟ್ಟಣಗಳಲ್ಲಿ  ಪರಿಸ್ಥಿತಿ ಕೊಂಚ ಶಾಂತವಾಗಿರುವ  ಹಿನ್ನಲೆಯಲ್ಲಿ ಕರ್ಫ್ಯೂ ತೆರವುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.

ಇದೀಗ ಪುಲ್ವಾಮವನ್ನು ಹೊರತು ಪಡಿಸಿ ಕಾಶ್ಮೀರದ ವಿವಿಧ ನಗರಗಳಲ್ಲಿ ಖಾಸಗಿ ಬಸ್, ಆಟೋ ರಿಕ್ಷಾ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಶುಕ್ರವಾರ ಹಾಗೂ ಶನಿವಾರ ಪರಿಸ್ಥಿತಿ  ಶಾಂತವಾಗಿರುವ  ಹಿನ್ನಲೆಯಲ್ಲಿ ಕರ್ಫ್ಯೂ ತೆರವುಗೊಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT