ಉಧ್ಯಮಿ ವಿಜಯ್ ಮಲ್ಯ (ಸಂಗ್ರಹ ಚಿತ್ರ) 
ದೇಶ

ಹಳೆಯ ಸಾಲವನ್ನೇ ತೀರಿಸಿಲ್ಲ, ಆದರೂ ಮಲ್ಯಾಗೆ 2ನೇ ಸಾಲ ಮಂಜೂರು ಮಾಡಿದ ಅಧಿಕಾರಿಗಳ ವಿರುದ್ಧ ಕೇಸ್!

ವಿವಿಧ ಬ್ಯಾಂಕ್ ಗಳಲ್ಲಿ ಬಹುಕೋಟಿ ಸಾಲ ಮಾಡಿ ವಿದೇಶಕ್ಕೆ ಹೋಗಿರುವ ಉದ್ಯಮಿ ವಿಜಯ್ ಮಲ್ಯಾಗೆ ಹೊಸ ಸಂಕಷ್ಟ ಶುರುವಾಗಿದ್ದು, ಮಲ್ಯಾಗೆ 2ನೇ ಬಾರಿ ಸಾಲ ನೀಡಿದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನವದೆಹಲಿ: ವಿವಿಧ ಬ್ಯಾಂಕ್ ಗಳಲ್ಲಿ ಬಹುಕೋಟಿ ಸಾಲ ಮಾಡಿ ವಿದೇಶಕ್ಕೆ ಹೋಗಿರುವ ಉದ್ಯಮಿ ವಿಜಯ್ ಮಲ್ಯಾಗೆ ಹೊಸ ಸಂಕಷ್ಟ ಶುರುವಾಗಿದ್ದು, ಮಲ್ಯಾಗೆ 2ನೇ ಬಾರಿ ಸಾಲ ನೀಡಿದ  ಬ್ಯಾಂಕ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಉದ್ಯಮಿ ವಿಜಯ್ ಮಲ್ಯಾಗೆ ನೀಡಿದ್ದ ಹಳೆಯ ಸಾಲವೇ ಇನ್ನೂ ತೀರಿಲ್ಲ. ಹೀಗಿದ್ದೂ ಅವರಿಗೆ ಎರಡೆರಡು ಬಾರಿ ಸಾಲ ಮಂಜೂರು ಮಾಡಿದ ಸಾರ್ವಜನಿಕ ಬ್ಯಾಂಕ್ ಗಳ 14 ಅಧಿಕಾರಿಗಳ ವಿರುದ್ಧ  ಗಂಭೀರ ವಂಚನೆ ತನಿಖಾ ಕಚೇರಿ ಅಧಿಕಾರಿಗಳು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕೆಲ ವರ್ಷಗಳ ಹಿಂದೆ ವಿಜಯ್ ಮಲ್ಯ ಒಡೆತನ ಕಿಂಗ್ ಫಿಶರ್ ಏರ್ ಲೈನ್ಸ್ ಸಂಸ್ಥೆಗೆ  ನೀಡಲಾಗಿದ್ದ ಸಾಲದ ಪ್ರಮಾಣವನ್ನು ಹೆಚ್ಚಿಸಲಾಗಿತ್ತು.

ಈ ಅಂಶವನ್ನು ತನಿಖಾಧಿಕಾರಿಗಳು ಇದೀಗ ಮನಗಂಡಿದ್ದು, ಹಳೆಯ ಸಾಲವನ್ನೇ ವಾಪಸ್ ಮಾಡದ ವಿಜಯ್ ಮಲ್ಯಾ ಸಂಸ್ಥೆಗೆ ನೀಡಲಾಗಿದ್ದ ಸಾಲದ ಪ್ರಮಾಣವನ್ನು ಹೆಚ್ಚಿಸಲು ಕಾರಣವೇನು  ಎಂದು ಸ್ಪಷ್ಟನೆ ಕೇಳಿ ತನಿಖಾಧಿಕಾರಿಗಳು ಅಂದಿನ ಬ್ಯಾಂಕ್ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ ಈ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಮೂಲಗಳ ಪ್ರಕಾರ  ಅಧಿಕಾರಿಗಳು ಈಗಾಗಲೇ ಅಂದಿನ ಬ್ಯಾಂಕ್ ಅಧಿಕಾರಿಗಳನ್ನು ಒಂದು ಸುತ್ತಿನ ವಿಚಾರಣೆಗೆ ಒಳಪಡಿಸಿದ್ದು, ಮತ್ತಷ್ಟು ಮಾಹಿತಿ ಸಂಗ್ರಹಕ್ಕಾಗಿ ಮತ್ತೆ ಅವರನ್ನು ವಿಚಾರಣೆಗೆ ಒಳಪಡಿಸುವ  ಸಾಧ್ಯತೆ ಇದೆ.

ವಿಜಯ್ ಮಲ್ಯಗೆ ಸಾಲ ನೀಡಲು ಕಿಕ್ ಬ್ಯಾಕ್ ಪಡೆದ ಅಧಿಕಾರಿಗಳು?
ಇನ್ನು ವಿಜಯ್ ಮಲ್ಯಾಗೆ 2ನೇ ಬಾರಿ ಸಾಲ ನೀಡಲು ಬ್ಯಾಂಕ್ ಅಧಿಕಾರಿಗಳು ಕಿಕ್ ಬ್ಯಾಕ್ ಪಡೆದಿದ್ದಾರೆಯೇ ಎಂಬ ಶಂಕೆ ಗಂಭೀರ ವಂಚನೆ ತನಿಖಾ ಕಚೇರಿ ಅಧಿಕಾರಿಗಳನ್ನು ಕಾಡುತ್ತಿದ್ದು,  ಅದಾಗಲೇ ಸಾಲ ಪಡೆದಿದ್ದ ಮಲ್ಯಾಗೆ ಆ ಸಾಲ ಇನ್ನೂ ತೀರದ ಹೋದರೂ ಮತ್ತೆ ಸಾಲ ನೀಡುವ ಅಥವಾ ಸಾಲದ ಪ್ರಮಾಣವನ್ನು ಹೆಚ್ಚಿಸುವ ಜರೂರತ್ತು ಬ್ಯಾಂಕ್ ಅಧಿಕಾರಿಗಳಿಗೆ ಏನಿತ್ತು  ಎಂದು ಎಸ್ಎಫ್ಐಒ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ಇದೇ ಕಾರಣಕ್ಕೆ ಅವರು ಬ್ಯಾಂಕ್ ನ ಮಾಜಿ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಅನುಮಾನ ಹುಟ್ಟಿಸುವ ಅಂಶಗಳು

ಬ್ಯಾಂಕ್ ಅಧಿಕಾರಿಗಳು ನೀಡಿರುವ ದಾಖಲೆಗಳ ಪ್ರಕಾರ ಮಲ್ಯಾಗೆ ಸಾಲ ನೀಡಲು ಕಿಂಗ್ ಫಿಷರ್ ಸಂಸ್ಥೆ ಸಲ್ಲಿಸಿದ್ದ ದಾಖಲೆಗಳನ್ನು ಸಂಪೂರ್ಣ ಪರಿಶೀಲಿಸುವ ಮುನ್ನವೇ ಸಾಲ  ಮಂಜೂರಾಗಿದ್ದು ಏಕೆ? ಮಲ್ಯ ಸಲ್ಲಿಸಿದ್ದ ದಾಖಲೆಗಳು ಮೇಲ್ನೋಟಕ್ಕೆ ಫೋರ್ಜರಿ ಮಾಡಿರುವುದು ಸಾಬೀತಾಗಿದ್ದರೂ, ಅದನ್ನು ಹೆಚ್ಚಿನ ಪರೀಕ್ಷೆಗೆ ಕಳುಹಿಸಲಾಗಿಲ್ಲ. ಬ್ಯಾಂಕ್ ನ ಈ ಕ್ರಮದ ಹಿಂದೆ  ಅಧಿಕಾರಿಯ ಕೈವಾಡವಿತ್ತೆ ಎಂಬ ಅನುಮಾನ ಕಾಡುತ್ತಿದೆ. ಅಂತೆಯೇ ಅದಾಗಲೇ ಮಲ್ಯ ಸಾಲಪಡೆದಿದ್ದರೂ 2007 ಮತ್ತು 2010ರ ಅವಧಿಯಲ್ಲಿ ಮತ್ತೆ ಮಲ್ಯಗೆ ಸಾಲ ನೀಡಿದ್ದು ಅಥವಾ ಸಾಲದ  ಪ್ರಮಾಣವನ್ನು ಏರಿಕೆ ಮಾಡಿದ್ದು ಏಕೆ? ಎಂಬ ಪ್ರಶ್ನೆಗಳು ಉದ್ಭವಿಸುತ್ತವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT