ಪ್ರಧಾನಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ) 
ದೇಶ

ವಿದ್ಯಾರ್ಥಿನಿ ಪತ್ರಕ್ಕೆ ಸ್ಪಂದನೆ: ಒಲಿಂಪಿಕ್ಸ್ ತಯಾರಿಗೆ ಆಟದ ಮೈದಾನ ಕಲ್ಪಿಸಿದ ಮೋದಿ

ಒಲಿಂಪಿಕ್ಸ್ ನಲ್ಲಿ ಭಾಗವಹಿಸಿ ಭಾರತವನ್ನು ಮಿಂಚುವಂತೆ ಮಾಡಬೇಕೆಂಬುದು ನನ್ನ ಆಸೆ. ಆದರೆ, ನಮಗೆ ಮೈದಾನದ ಸೌಲಭ್ಯವಿಲ್ಲವೆಂದು ವಿದ್ಯಾರ್ಥಿನಿ ಬರೆದಿದ್ದ ಪತ್ರವೊಂದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ಪಂದನೆ...

ಮುಂಬೈ: ಒಲಿಂಪಿಕ್ಸ್ ನಲ್ಲಿ ಭಾಗವಹಿಸಿ ಭಾರತವನ್ನು ಮಿಂಚುವಂತೆ ಮಾಡಬೇಕೆಂಬುದು ನನ್ನ ಆಸೆ. ಆದರೆ, ನಮಗೆ ಮೈದಾನದ ಸೌಲಭ್ಯವಿಲ್ಲವೆಂದು ವಿದ್ಯಾರ್ಥಿನಿ ಬರೆದಿದ್ದ ಪತ್ರವೊಂದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ಪಂದನೆ ನೀಡಿದ್ದು, ವಿದ್ಯಾರ್ಥಿಗಳಿಗೆ ಒಲಿಂಪಿಕ್ಸ್ ತಯಾರಿಗಾಗಿ ಆಟದ ಮೈದಾನವೊಂದನ್ನು ಕಲ್ಪಿಸಿದ್ದಾರೆ.

ಸಾಕ್ಷಿ ತಿವಾರಿ ಮೋದಿಯವರಿಗೆ ಪತ್ರ ಬರೆದ ವಿದ್ಯಾರ್ಥಿನಿಯಾಗಿದ್ದು, ಈಕೆ ನವೀ ಮುಂಬೈನ ಶಾಲೆಯೊಂದರಲ್ಲಿ 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಾಳೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೇಡಿಯೋ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದು, ಕಾರ್ಯಕ್ರಮದ ವೇಳೆಯಲ್ಲಿ ದೇಶದ ಜನರು ಬರೆಯುವ ಪತ್ರಗಳನ್ನು ಓದುತ್ತಾರೆಂದು ತಿಳಿದ ಸಾಕ್ಷಿ ತಿವಾರಿ ಮೋದಿಯವರಿಗೆ ಪತ್ರವೊಂದನ್ನು ಬರೆದಿದ್ದಳು.

ಪತ್ರದಲ್ಲಿ ತನಗೆ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ಆಸೆಯಿದೆ. ಒಲಿಂಪಿಕ್ಸ್ ನಲ್ಲಿ ಭಾರತವನ್ನು ಮಿನುಗುವಂತೆ ಮಾಡುವುದು ನನ್ನ ದೊಡ್ಡ ಕನಸಾಗಿದೆ. ಆದರೆ, ತಯಾರಿ ನಡೆಸಲು ನಮ್ಮ ಶಾಲೆಯಲ್ಲಿ ಮೈದಾನವಿಲ್ಲ. ಹೀಗಾಗಿ ಒಂದು ಮೈದಾನವನ್ನು ನಿರ್ಮಿಸಿಕೊಡುವಂತೆ ಮೋದಿಯವರಿಗೆ ಮನವಿ ಮಾಡಿಕೊಂಡಿದ್ದಳು.

ವಿದ್ಯಾರ್ಥಿನಿಯ ಪತ್ರಕ್ಕೆ ಕೂಡಲೇ ಸ್ಪಂದನೆ ನೀಡಿರುವ ಪ್ರಧಾನಿ ಸಚಿವಾಲಯವು, ಇದೀಗ ನವೀ ಮುಂಬೈನ ಸಮೀಪವಿರುವ ಮೈದಾನವೊಂದನ್ನು ವಿದ್ಯಾರ್ಥಿನಿ ವ್ಯಾಸಾಂಗ ಮಾಡುತ್ತಿರುವ ಶಾಲೆಯ ಉಪಯೋಗಕ್ಕೆ ನೀಡುವಂತೆ ಅಲ್ಲಿನ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಇದೀಗ ಈ ಮೈದಾನವನ್ನು ಶಾಲೆ ಉಪಯೋಗಿಸಿಕೊಳ್ಳುತ್ತಿದೆ ಎಂದು ಶಾಲಾ ಆಡಳತಿ ಮಂಡಳಿ ಹೇಳಿಕೊಂಡಿದೆ.

ಬಾಲಕಿಯ ಮನವಿ ಪತ್ರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿರುವುದಕ್ಕೆ ಸಾಕಷ್ಟು ಶ್ಲಾಘನೆಗಳು ವ್ಯಕ್ತವಾಗುತ್ತಿವೆ. ಅಲ್ಲದೆ, ವಿದ್ಯಾರ್ಥಿನಿ ಸಾಕ್ಷಿ ತಿವಾರಿ ಕೂಡ ಮೋದಿಯವರಿಗೆ ಧನ್ಯವಾದ ಹೇಳಿದ್ದಾಳೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ