ಜಾನ್ ಕೆರ್ರಿ 
ದೇಶ

ದೆಹಲಿ ಮಳೆ ಬಗ್ಗೆ ಹಾಸ್ಯ ಮಾಡಿದ ಅಮೆರಿಕ ಕಾರ್ಯದರ್ಶಿ ಜಾನ್ ಕೆರ್ರಿ

ನವದೆಹಲಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಭಾರತ ಪ್ರವಾಸದಲ್ಲಿರುವ ಅಮೆರಿಕ ಕಾರ್ಯದರ್ಶಿ ಜಾನ್ ಕೆರ್ರಿ ಮಳೆ ಬಗ್ಗೆ ಲಘು ಹಾಸ್ಯ ಮಾಡಿದ್ದಾರೆ.

ನವದೆಹಲಿ: ನವದೆಹಲಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಭಾರತ ಪ್ರವಾಸದಲ್ಲಿರುವ ಅಮೆರಿಕ ಕಾರ್ಯದರ್ಶಿ ಜಾನ್ ಕೆರ್ರಿ ಮಳೆ ಬಗ್ಗೆ ಲಘು ಹಾಸ್ಯ ಮಾಡಿದ್ದಾರೆ. 
ಐಐಟಿ- ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಾನ್ ಕೆರ್ರಿ, ನೀವು ದೋಣಿಗಳಲ್ಲಿ ಬಂದಿದ್ದೀರಾ? ಎಂದು ವಿದ್ಯಾರ್ಥಿಗಳನ್ನು ಕೇಳಿದ್ದಾರೆ. ನೀವು ದೋಣಿಗಳಲ್ಲಿ ಬಂದಿದ್ದೀರಾ ಅಥವಾ ನೆಲ, ನೀರು ಎರಡರಲ್ಲೂ ಸಂಚರಿಸುವ ವಾಹನಗಳಲ್ಲಿ ಬಂದಿದ್ದೀರಾ ನನಗೆ ಗೊತ್ತಿಲ್ಲ. ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.
ನವದೆಹಲಿಯ ಐಐಟಿ ರಸ್ತೆಯಲ್ಲಿ ನೀರು ನಿಂತಿದ್ದು, ಕಾರ್ಯಕ್ರಮಕ್ಕೆ ತಡವಾಗಿ ಬಂದ ಜಾನ್ ಕೆರ್ರಿ ದೆಹಲಿಯ ಮಳೆ ಬಗ್ಗೆ ಲಘು ಧಾಟಿಯಲ್ಲಿ ಹಾಸ್ಯ ಮಾಡಿದ್ದಾರೆ, ನವದೆಹಲಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಜಾನ್ ಕೆರ್ರಿ ಭೇಟಿ ನೀಡಬೇಕಿದ್ದ ಮೂರೂ ಧಾರ್ಮಿಕ ಕೇಂದ್ರಗಳ ಭೇಟಿಯನ್ನು ರದ್ದುಪಡಿಸಿದ್ದಾರೆ. ಟ್ರಾಫಿಕ್ ನಲ್ಲಿ ಸಿಲುಕಿದ ಪರಿಣಾಮ ಕೆರ್ರಿ ತಮ್ಮ ಬೆಂಗಾವಲು ಪಡೆಯೊಂದಿಗೆ ವಿಮಾನ ನಿಲ್ದಾಣದಿಂದ ಹೋಟೆಲ್ ಗೆ ತೆರಳಲು ಸುಮಾರು ಒಂದು ಗಂಟೆ ಕಾದಿದ್ದಾರೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT