ಜಾನ್ ಕೆರ್ರಿ 
ದೇಶ

ದೆಹಲಿ ಮಳೆ ಬಗ್ಗೆ ಹಾಸ್ಯ ಮಾಡಿದ ಅಮೆರಿಕ ಕಾರ್ಯದರ್ಶಿ ಜಾನ್ ಕೆರ್ರಿ

ನವದೆಹಲಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಭಾರತ ಪ್ರವಾಸದಲ್ಲಿರುವ ಅಮೆರಿಕ ಕಾರ್ಯದರ್ಶಿ ಜಾನ್ ಕೆರ್ರಿ ಮಳೆ ಬಗ್ಗೆ ಲಘು ಹಾಸ್ಯ ಮಾಡಿದ್ದಾರೆ.

ನವದೆಹಲಿ: ನವದೆಹಲಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಭಾರತ ಪ್ರವಾಸದಲ್ಲಿರುವ ಅಮೆರಿಕ ಕಾರ್ಯದರ್ಶಿ ಜಾನ್ ಕೆರ್ರಿ ಮಳೆ ಬಗ್ಗೆ ಲಘು ಹಾಸ್ಯ ಮಾಡಿದ್ದಾರೆ. 
ಐಐಟಿ- ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಾನ್ ಕೆರ್ರಿ, ನೀವು ದೋಣಿಗಳಲ್ಲಿ ಬಂದಿದ್ದೀರಾ? ಎಂದು ವಿದ್ಯಾರ್ಥಿಗಳನ್ನು ಕೇಳಿದ್ದಾರೆ. ನೀವು ದೋಣಿಗಳಲ್ಲಿ ಬಂದಿದ್ದೀರಾ ಅಥವಾ ನೆಲ, ನೀರು ಎರಡರಲ್ಲೂ ಸಂಚರಿಸುವ ವಾಹನಗಳಲ್ಲಿ ಬಂದಿದ್ದೀರಾ ನನಗೆ ಗೊತ್ತಿಲ್ಲ. ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.
ನವದೆಹಲಿಯ ಐಐಟಿ ರಸ್ತೆಯಲ್ಲಿ ನೀರು ನಿಂತಿದ್ದು, ಕಾರ್ಯಕ್ರಮಕ್ಕೆ ತಡವಾಗಿ ಬಂದ ಜಾನ್ ಕೆರ್ರಿ ದೆಹಲಿಯ ಮಳೆ ಬಗ್ಗೆ ಲಘು ಧಾಟಿಯಲ್ಲಿ ಹಾಸ್ಯ ಮಾಡಿದ್ದಾರೆ, ನವದೆಹಲಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಜಾನ್ ಕೆರ್ರಿ ಭೇಟಿ ನೀಡಬೇಕಿದ್ದ ಮೂರೂ ಧಾರ್ಮಿಕ ಕೇಂದ್ರಗಳ ಭೇಟಿಯನ್ನು ರದ್ದುಪಡಿಸಿದ್ದಾರೆ. ಟ್ರಾಫಿಕ್ ನಲ್ಲಿ ಸಿಲುಕಿದ ಪರಿಣಾಮ ಕೆರ್ರಿ ತಮ್ಮ ಬೆಂಗಾವಲು ಪಡೆಯೊಂದಿಗೆ ವಿಮಾನ ನಿಲ್ದಾಣದಿಂದ ಹೋಟೆಲ್ ಗೆ ತೆರಳಲು ಸುಮಾರು ಒಂದು ಗಂಟೆ ಕಾದಿದ್ದಾರೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT