ಸುಪ್ರೀಂ ಕೋರ್ಟ್ 
ದೇಶ

ಟಾಟಾಗೆ ಸುಪ್ರೀಂ ಮುಖಭಂಗ, ಸಿಂಗೂರ್ ನಲ್ಲಿ ನ್ಯಾನೊಗೆ ನೀಡಿದ್ದ ಭೂಮಿ ವಾಪಸ್

ಟಾಟಾ ಮೋಟಾರ್ಸ್ ಹಾಗೂ ಪಶ್ಚಿಮ ಬಂಗಾಳದಲ್ಲಿ ಅಧಿಕಾರದಲ್ಲಿದ್ದ ಅಂದಿನ ಸಿಪಿಎಂ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಭಾರಿ ಹಿನ್ನೆಡೆಯಾಗಿದ್ದು,...

ನವದೆಹಲಿ: ಟಾಟಾ ಮೋಟಾರ್ಸ್ ಹಾಗೂ ಪಶ್ಚಿಮ ಬಂಗಾಳದಲ್ಲಿ ಅಧಿಕಾರದಲ್ಲಿದ್ದ ಅಂದಿನ ಸಿಪಿಎಂ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಭಾರಿ ಹಿನ್ನೆಡೆಯಾಗಿದ್ದು, ನ್ಯಾನೊ ಕಾರು ತಯಾರಿಕಾ ಘಟಕ ಸ್ಥಾಪಿಸಲು ಟಾಟಾ ಮೋಟಾರ್ಸ್‌ ಕಂಪೆನಿಗೆ ಸಿಂಗೂರ್ ನಲ್ಲಿ ನೀಡಿದ್ದ ಭೂಮಿ ಒಪ್ಪಂದವನ್ನು ಕೋರ್ಟ್ ಬುಧವಾರ ರದ್ದುಪಡಿಸಿದೆ.
2006ರಲ್ಲಿ ಪಶ್ಚಿಮ ಬಂಗಾಳದ ಹಿಂದಿನ ಎಡಪಕ್ಷ ಸರ್ಕಾರ ಟಾಟಾ ಕಂಪನಿಗೆ 997 ಎಕರೆ ಭೂಮಿ ಮಂಜೂರು ಮಾಡಿತ್ತು. ಆದರೆ ಈ ಆದೇಶವನ್ನು ರದ್ದುಗೊಳಿಸಿರುವ ನ್ಯಾಯಮೂರ್ತಿ ವಿ.ಗೋಪಾಲ್ ಗೌಡ ಹಾಗೂ ನ್ಯಾಮೂರ್ತಿ ಅರುಣ್ ಮಿಶ್ರಾ ಅವರನ್ನೊಳಗೊಂಡ ಸುಪ್ರೀಂ ಪೀಠ, ಅಂದಿನ ಸರ್ಕಾರ ಭೂಸ್ವಾದೀನ ಪ್ರಕ್ರಿಯೆಯಲ್ಲಿ ನಿಯಮಾವಳಿಗಳನ್ನು ಪಾಲಿಸಿಲ್ಲ. ಹೀಗಾಗಿ ಆ ಭೂಮಿಯನ್ನು ರೈತರಿಗೆ ಹಿಂದಿರುಗಿಸುವಂತೆ ತೀರ್ಪು ನೀಡಿದೆ. 
ಕಳೆದ 10 ವರ್ಷಗಳಿಂದ ಭೂಮಿ ಕಳೆದುಕೊಂಡು ನಷ್ಟ ಅನುಭವಿಸಿದ ರೈತರು ರಾಜ್ಯ ಸರ್ಕಾರ ನೀಡಿದ್ದ ಪರಿಹಾರದ ಹಣವನ್ನೂ ವಾಪಸ್ ನೀಡಬೇಕಾಗಿಲ್ಲ ಎಂದಿರುವ ಕೋರ್ಟ್, ಮುಂದಿನ 12 ವಾರಗಳಲ್ಲಿ ಭೂಮಿ ಮರಳಿಸುವಂತೆ ಆದೇಶಿಸಿದೆ.
ಇದರಿಂದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಮಮತಾ ಬ್ಯಾನರ್ಜಿ ಅವರು ಸಿಂಗೂರ್ ನ್ಯಾನೊ ಕಾರು ಘಟಕ ಸ್ಥಾಪನೆಗೆ ವಿರೋಧಿ ತೀವ್ರ ಪ್ರತಿಭಟನೆ ನಡೆಸಿದ್ದರು. ಇದರಿಂದಾಗಿ ನ್ಯಾನೊ ಘಟಕ ಗುಜರಾತ್ ಗೆ ಸ್ಥಳಾಂತರಗೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್