ಸುಪ್ರೀಂ ಕೋರ್ಟ್ 
ದೇಶ

ಟಾಟಾಗೆ ಸುಪ್ರೀಂ ಮುಖಭಂಗ, ಸಿಂಗೂರ್ ನಲ್ಲಿ ನ್ಯಾನೊಗೆ ನೀಡಿದ್ದ ಭೂಮಿ ವಾಪಸ್

ಟಾಟಾ ಮೋಟಾರ್ಸ್ ಹಾಗೂ ಪಶ್ಚಿಮ ಬಂಗಾಳದಲ್ಲಿ ಅಧಿಕಾರದಲ್ಲಿದ್ದ ಅಂದಿನ ಸಿಪಿಎಂ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಭಾರಿ ಹಿನ್ನೆಡೆಯಾಗಿದ್ದು,...

ನವದೆಹಲಿ: ಟಾಟಾ ಮೋಟಾರ್ಸ್ ಹಾಗೂ ಪಶ್ಚಿಮ ಬಂಗಾಳದಲ್ಲಿ ಅಧಿಕಾರದಲ್ಲಿದ್ದ ಅಂದಿನ ಸಿಪಿಎಂ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಭಾರಿ ಹಿನ್ನೆಡೆಯಾಗಿದ್ದು, ನ್ಯಾನೊ ಕಾರು ತಯಾರಿಕಾ ಘಟಕ ಸ್ಥಾಪಿಸಲು ಟಾಟಾ ಮೋಟಾರ್ಸ್‌ ಕಂಪೆನಿಗೆ ಸಿಂಗೂರ್ ನಲ್ಲಿ ನೀಡಿದ್ದ ಭೂಮಿ ಒಪ್ಪಂದವನ್ನು ಕೋರ್ಟ್ ಬುಧವಾರ ರದ್ದುಪಡಿಸಿದೆ.
2006ರಲ್ಲಿ ಪಶ್ಚಿಮ ಬಂಗಾಳದ ಹಿಂದಿನ ಎಡಪಕ್ಷ ಸರ್ಕಾರ ಟಾಟಾ ಕಂಪನಿಗೆ 997 ಎಕರೆ ಭೂಮಿ ಮಂಜೂರು ಮಾಡಿತ್ತು. ಆದರೆ ಈ ಆದೇಶವನ್ನು ರದ್ದುಗೊಳಿಸಿರುವ ನ್ಯಾಯಮೂರ್ತಿ ವಿ.ಗೋಪಾಲ್ ಗೌಡ ಹಾಗೂ ನ್ಯಾಮೂರ್ತಿ ಅರುಣ್ ಮಿಶ್ರಾ ಅವರನ್ನೊಳಗೊಂಡ ಸುಪ್ರೀಂ ಪೀಠ, ಅಂದಿನ ಸರ್ಕಾರ ಭೂಸ್ವಾದೀನ ಪ್ರಕ್ರಿಯೆಯಲ್ಲಿ ನಿಯಮಾವಳಿಗಳನ್ನು ಪಾಲಿಸಿಲ್ಲ. ಹೀಗಾಗಿ ಆ ಭೂಮಿಯನ್ನು ರೈತರಿಗೆ ಹಿಂದಿರುಗಿಸುವಂತೆ ತೀರ್ಪು ನೀಡಿದೆ. 
ಕಳೆದ 10 ವರ್ಷಗಳಿಂದ ಭೂಮಿ ಕಳೆದುಕೊಂಡು ನಷ್ಟ ಅನುಭವಿಸಿದ ರೈತರು ರಾಜ್ಯ ಸರ್ಕಾರ ನೀಡಿದ್ದ ಪರಿಹಾರದ ಹಣವನ್ನೂ ವಾಪಸ್ ನೀಡಬೇಕಾಗಿಲ್ಲ ಎಂದಿರುವ ಕೋರ್ಟ್, ಮುಂದಿನ 12 ವಾರಗಳಲ್ಲಿ ಭೂಮಿ ಮರಳಿಸುವಂತೆ ಆದೇಶಿಸಿದೆ.
ಇದರಿಂದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಮಮತಾ ಬ್ಯಾನರ್ಜಿ ಅವರು ಸಿಂಗೂರ್ ನ್ಯಾನೊ ಕಾರು ಘಟಕ ಸ್ಥಾಪನೆಗೆ ವಿರೋಧಿ ತೀವ್ರ ಪ್ರತಿಭಟನೆ ನಡೆಸಿದ್ದರು. ಇದರಿಂದಾಗಿ ನ್ಯಾನೊ ಘಟಕ ಗುಜರಾತ್ ಗೆ ಸ್ಥಳಾಂತರಗೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT