ರಾಜಮಾತೆ ಪದ್ಮಿನಿ ದೇವಿಯೊಂದಿಗೆ ಪ್ರತಿಭಟನಾಕಾರರು 
ದೇಶ

ಜೆಡಿಎ ವಿರುದ್ಧ ಜೈಪುರ ರಾಜಮನೆತನದಿಂದ ಪ್ರತಿಭಟನೆ

ರಾಜ್ ಮಹಲ್ ಅರಮನೆ ಸಂಬಂಧ ಜೈಪುರ ಅಭಿವೃದ್ಧಿ ಪ್ರಾಧಿಕಾರ(ಜೆಡಿಎ) ವಿರುದ್ಧ ಜೈಪುರ ರಾಜಮನೆತನದ ರಾಜಮಾತೆ ಪದ್ಮಿನಿ ದೇವಿ...

ಜೈಪುರ: ರಾಜ್ ಮಹಲ್ ಅರಮನೆ ಸಂಬಂಧ ಜೈಪುರ ಅಭಿವೃದ್ಧಿ ಪ್ರಾಧಿಕಾರ(ಜೆಡಿಎ) ವಿರುದ್ಧ ಜೈಪುರ ರಾಜಮನೆತನದ ರಾಜಮಾತೆ ಪದ್ಮಿನಿ ದೇವಿ ಅವರು ಸಾವಿರಾರು ಬೆಂಬಲಿಗರೊಂದಿಗೆ ಗುರುವಾರ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.
ಜೆಡಿಎ ಅಧಿಕಾರಿಗಳು ಅರಮನೆಯ ಮುಖ್ಯ ದ್ವಾರವನ್ನು ಬಂದ್ ಮಾಡುವ ರಾಜಮನೆತನಕ್ಕೆ ಅಗೌರವ ತೋರಿದ್ದಾರೆ ಎಂದು ಪದ್ಮಿನಿ ದೇವಿ ಅವರು ಆರೋಪಿಸಿದ್ದಾರೆ. ಮುಖ್ಯ ದ್ವಾರ ತನ್ನ ಜಾಗದಲ್ಲಿದೆ ಎಂದು ಕಳೆದ ವಾರ ಜೆಡಿಎ ಅದನ್ನು ಬಂದ್ ಮಾಡಿತ್ತು.
ಇಂದು ಜೆಡಿಎ ವಿರುದ್ಧ ಬಲಪ್ರದರ್ಶನಕ್ಕೆ ಮುಂದಾದ ರಾಜಮಾತೆ ನಗರದ ಅರಮನೆಯಿಂದ ತ್ರಿಪೊಲಿಯಾ ಗೇಟ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ತೆರೆದ ವಾಹನದಿಂದಲೇ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪದ್ಮಿನಿ ದೇವಿ ಅವರು, ಇಂದು ಇಡೀ ಜೈಪೂರ ನಮ್ಮೊಂದಿಗಿದೆ. ರಾಜ್ ಮಹಲ್ ಅರಮನೆಗೆ ಸಂಬಂಧಿಸಿದಂತೆ ಜೆಡಿಎ ಹಸ್ತಕ್ಷೇಪದಿಂದ ನನಗೆ ತುಂಬಾ ನೋವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT