ಸುಭಾಷ್ ವೆಲಿಂಗ್ಕರ್ 
ದೇಶ

ವೆಲಿಂಗ್ಕರ್ ವಜಾಗೆ ವಿರೋಧ: ಗೋವಾ ಆರ್ ಎಸ್ ಎಸ್ ನ 400 ಸ್ವಯಂ ಸೇವಕರಿಂದ ಸಾಮೂಹಿಕ ರಾಜೀನಾಮೆ

ಗೋವಾ ರಾಜ್ಯದ ಆರ್ ಎಸ್ ಎಸ್ ಮುಖ್ಯಸ್ಥ ಸುಭಾಷ್ ವೆಲಿಂಗ್ಕರ್ ಅವರನ್ನು ವಜಾಗೊಳಿಸಿರುವುದನ್ನು ಖಂಡಿಸಿ, ಗೋವಾದ ಸುಮಾರು 400 ಕ್ಕೂ ಹೆಚ್ಚು ಸ್ವಯಂ ಸೇವಕರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಪಣಜಿ: ಗೋವಾ ರಾಜ್ಯದ ಆರ್ ಎಸ್ ಎಸ್ ಮುಖ್ಯಸ್ಥ ಸುಭಾಷ್ ವೆಲಿಂಗ್ಕರ್ ಅವರನ್ನು ವಜಾಗೊಳಿಸಿರುವುದನ್ನು ಖಂಡಿಸಿ, ಗೋವಾದ ಸುಮಾರು 400 ಕ್ಕೂ ಹೆಚ್ಚು ಸ್ವಯಂ ಸೇವಕರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಸುಭಾಷ್ ವೆಲಿಂಗ್ಕರ್ ಅವರನ್ನು ವಜಾಗೊಳಿಸಿದ ಬಳಿಕ ಪಣಜಿಯಲ್ಲಿ ನಡೆದ ಸತತ 6 ಗಂಟೆಗಳ ಚರ್ಚೆ ನಂತರ ಜಿಲ್ಲಾ, ಉಪಜಿಲ್ಲಾ ಶಾಖಾ ಪ್ರಮುಖರು ಸೇರಿದಂತೆ ಒಟ್ಟು 400 ಕ್ಕೂ ಹೆಚ್ಚು ಸ್ವಯಂ ಸೇವಕರು ಆರ್ ಎಸ್ ಎಸ್ ನಿಂದ ಹೊರನಡೆಯುವ ತೀರ್ಮಾನ ಕೈಗೊಂಡಿದ್ದಾರೆ. ವೆಲಿಂಗ್ಕರ್ ಅವರನ್ನು ವಜಾಗೊಳಿಸಿರುವುದನ್ನು ಖಂಡಿಸಿರುವ ಆರ್ ಎಸ್ ಎಸ್ ನ ಪದಾಧಿಕಾರಿಗಳು, ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಆರ್ ಎಸ್ ಎಸ್, ಬಿಜೆಪಿಯ ಉನ್ನತ ಮಟ್ಟದ ನಾಯಕರು ವೆಲಿಂಗ್ಕರ್ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದು, ವೆಲಿಂಗ್ಕರ್ ಅವರನ್ನು ಪುನಃ ನೇಮಕ ಮಾಡುವವರೆಗೂ ಸಾಮೂಹಿಕ ರಾಜೀನಾಮೆ ನಿರ್ಧಾರವನ್ನು ಹಿಂಪಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಸಭೆಯ ಬಳಿಕ ಮಾತನಾಡಿರುವ ಆರ್ ಎಸ್ ಎಸ್ ನ ಪದಾಧಿಕಾರಿಗಳಾಗಿರುವ ರಾಮದಾಸ್ ಸರಫ್, ಎಲ್ಲಾ ಜಿಲ್ಲಾ ಕೇಂದ್ರಗಳ ವಿಭಾಗದ ಮುಖ್ಯಸ್ಥರು ಸುಭಾಷ್ ವೆಲಿಂಗ್ಕರ್ ಅವರನ್ನು ಪುನಃ ನೇಮಕ ಮಾಡುವವರೆಗೆ ರಾಜೀನಾಮೆ ನಿರ್ಧಾರದಿಂದ ಹಿಂದೆಸರಿಯುವುದಿಲ್ಲ ಎಂದು ತಿಳಿಸಿದ್ದಾರೆ.
 
ವೆಲಿಂಗ್ಕರ್ ಅವರು ಮುನ್ನಡೆಸುವ ಭಾರತೀಯ ಭಾಷಾ ಸುರಕ್ಷಾ ಮಂಚ್ (ಬಿಬಿಎಸ್ ಎಂ), ಗೋವಾ ಪ್ರಾಥಮಿಕ ಶಾಲೆಗಳಲ್ಲಿ ಪ್ರಾದೇಶಿಕ ಭಾಷೆಗಳಾದ ಕೊಂಕಣಿ ಮತ್ತು ಮರಾಠಿಯನ್ನು ಶೈಕ್ಷಣಿಕ ಮಾಧ್ಯಮವನ್ನಾಗಿಸಬೇಕು ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಸರ್ಕಾರ ಅನುದಾನ ನೀಡಬಾರದು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದರು. ಗೋವಾದ ಬಿಜೆಪಿ ಸರ್ಕಾರದ ವಿರುದ್ಧದ ನಡೆಯಿಂದ ಅಸಮಾಧಾನಗೊಂಡ ರಾಷ್ಟ್ರೀಯ ಸವಯಂಸೇವಕ ಸಂಘ (ಆರ್ ಎಸ್ ಎಸ್), ಬುಧವಾರ ಸಂಘಟನೆಯ ಗೋವಾ ಅಧ್ಯಕ್ಷ ಸುಭಾಷ್ ವೆಲಿಂಗ್ಕರ್ ಅವರನ್ನು ವಜಾಗೊಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT