ಅರುಪ್ ರಹಾ 
ದೇಶ

ಸೇನೆ ಮೂಲಕ ಪರಿಹಾರ ಕಂಡುಕೊಂಡಿದ್ದರೆ ಪಿಒಕೆ ನಮ್ಮದಾಗುತ್ತಿತ್ತು: ಐಎಎಫ್ ಮುಖ್ಯಸ್ಥ

ಕಾಶ್ಮೀರ ಸಮಸ್ಯೆಯನ್ನು 'ನೈತಿಕ ನೆಲೆಗಟ್ಟಿ'ನ ಮೇಲೆ ಪರಿಹಾರ ಕಂಡುಕೊಳ್ಳುವ ಬದಲು ಸೇನೆಯ ಮೂಲಕ ಪರಿಹಾರ ಕಂಡುಕೊಳ್ಳುವುದಾದರೆ ಪಾಕ್...

ನವದೆಹಲಿ: ಕಾಶ್ಮೀರ ಸಮಸ್ಯೆಯನ್ನು 'ನೈತಿಕ ನೆಲೆಗಟ್ಟಿ'ನ ಮೇಲೆ ಪರಿಹಾರ ಕಂಡುಕೊಳ್ಳುವ ಬದಲು ಸೇನೆಯ ಮೂಲಕ ಪರಿಹಾರ ಕಂಡುಕೊಂಡಿದ್ದರೆ ಪಾಕ್ ಆಕ್ರಮಿತ ಕಾಶ್ಮೀರ ನಮ್ಮದಾಗುತ್ತಿತ್ತು ಎಂದು ಭಾರತೀಯ ವಾಯು ಪಡೆ(ಐಎಎಫ್) ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅರುಪ್ ರಹಾ ಅವರು ಗುರುವಾರ ಹೇಳಿದ್ದಾರೆ.
1971ರ ಭಾರತ-ಪಾಕ್ ಯುದ್ಧದವರೆಗೂ ವಾಯುಪಡೆಯ ಸಂಪೂರ್ಣ ಶಕ್ತಿಯನ್ನು ಬಳಸಿಕೊಳ್ಳಲಾಗಿಲ್ಲ ಎಂದಿರುವ ವಾಯುಪಡೆ ಮುಖ್ಯಸ್ಥ, ಪಾಕ್ ಆಕ್ರಮಿತ ಕಾಶ್ಮೀರ ಒಂದು ರೀತಿ ಮುಳ್ಳಿದ್ದಂತೆ ಎಂದಿದ್ದಾರೆ. ಅಲ್ಲದೆ ಭಾರತ ಭದ್ರತಾ ಅಗತ್ಯಗಳಿಗಾಗಿ ವ್ಯಾವಹಾರಿಕ ಮಾರ್ಗ ಅನುಸರಿಸಿಲ್ಲ ಎಂದು ಹೇಳಿದ್ದಾರೆ.
ಅಂತರಿಕ್ಷಯಾನ ಕುರಿತ ಕಾರ್ಯಾಗಾರವೊಂದರಲ್ಲಿ ಮಾತನಾಡಿದ ಅರುಪ್ ರಹಾ ಅವರು, ಉದಾತ್ತ ಚಿಂತನೆಗಳಿಗೆ ಜೋತು ಬಿದ್ದಿರುವ ನಾವು ತಾರ್ಕಿಕ ಮಾರ್ಗ ಅನುಸರಿಸುವುದಿಲ್ಲ. ದೇಶದ ಭದ್ರತೆ ವಿಚಾರದಲ್ಲಿ ಸೇನಾ ಶಕ್ತಿಯ ಬಳಕೆಯನ್ನು ಕಡೆಗಣಿಸಲಾಗಿದೆ. ಪಿಒಕೆ ಸಮಸ್ಯೆ ಪರಿಹರಿಸಿಕೊಳ್ಳಲು ನಾವು ವಿಶ್ವಸಂಸ್ಥೆ ಬಳಿ ಹೋದೆವು. ಆದರೆ ಸಮಸ್ಯೆ ಇನ್ನೂ ಪರಿಹಾರವಾಗಿಲ್ಲ. ಹೀಗಾಗಿ ಪಿಒಕೆ ಈಗಲೂ ನಮಗೆ ಮುಳ್ಳಾಗಿ ಕಾಡುತ್ತಿದೆ ಎಂದು ಹೇಳಿದ್ದಾರೆ.

ನಮ್ಮ ವಿದೇಶಾಂಗ ನೀತಿ ವಿಶ್ವಸಂಸ್ಥೆ, ಅಲಿಪ್ತ ನೀತಿ ಹಾಗೂ ಪಂಚಶೀಲ ಸಿದ್ಧಾಂತದಡಿ ಸ್ಥಾಪಿತವಾಗಿದೆ. ನಾವು ಉನ್ನತ ಆದರ್ಶಗಳನ್ನು ಹೊಂದಿದ್ದು, ಭದ್ರತಾ ಅಗತ್ಯಗಳಿಗಾಗಿ ವ್ಯವಹಾರಿಕ ಮಾರ್ಗವನ್ನು ಅನುಸರಿಸುವುದಿಲ್ಲ ಎಂದು ವಾಯುಪಡೆ ಮುಖ್ಯಸ್ಥರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT