ರಾಹುಲ್ ಗಾಂಧಿ ಮತ್ತು ಆರ್ ಎಸ್ ಎಸ್ ಮಾನಹಾನಿ ಜಟಾಪಟಿ 
ದೇಶ

ಆರ್ ಎಸ್ ಎಸ್ ಜನರೇ ಮಹಾತ್ಮನನ್ನು ಕೊಂದದ್ದು; ನ್ಯಾಯಾಲಯದಲ್ಲಿ ವಿಚಾರಣೆಗೆ ಸಿದ್ಧ: ರಾಹುಲ್

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜನರೇ ಮಹಾತ್ಮ ಗಾಂಧಿಯನ್ನು ಕೊಂದಿದ್ದು ಎಂಬ ತಮ್ಮ ಹೇಳಿಕೆಗೆ ಬದ್ಧರಾಗಿದ್ದು, ಈ ವಿಷಯವಾಗಿ ಆರ್ ಎಸ್ ಎಸ್ ತಮ್ಮ ಮೇಲೆ ಹೂಡಿರುವ ಮಾನನಷ್ಟ ಮೊಕದ್ದಮೆಯನ್ನು

ನವದೆಹಲಿ: 'ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜನರೇ ಮಹಾತ್ಮ ಗಾಂಧಿಯನ್ನು ಕೊಂದದ್ದು' ಎಂಬ ತಮ್ಮ ಹೇಳಿಕೆಗೆ ಬದ್ಧರಾಗಿದ್ದು, ಈ ವಿಷಯವಾಗಿ ಆರ್ ಎಸ್ ಎಸ್ ತಮ್ಮ ಮೇಲೆ ಹೂಡಿರುವ ಮಾನನಷ್ಟ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ನಲ್ಲಿ ಎದುರಿಸಲಿದ್ದೇನೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. 
2014 ರಲ್ಲಿ ಚುನಾವಣಾ ಪ್ರಚಾರ ಭಾಷಣದಲ್ಲಿ ರಾಹುಲ್, ಮಹಾತ್ಮಾ ಗಾಂಧಿ ಹತ್ಯೆಗೆ ಆರ್ ಎಸ್ ಎಸ್ ನನ್ನ ದೂಷಿಸಿದ್ದರು. ಇದನ್ನು ಪ್ರಶ್ನಿಸಿ ಆರ್ ಎಸ್ ಎಸ್ ರಾಹುಲ್ ವಿರುದ್ಧ ಮಾನನಷ್ಟ ಮೊಕ್ಕದ್ದಮೆ ಹೂಡಿತ್ತು.
ಕಳೆದ ಬಾರಿಯ ವಿಚಾರಣೆಯಲ್ಲಿ, ರಾಹುಲ್ ಪರವಾಗಿ ವಾದಿಸಿದ್ದ ಕಪಿಲ್ ಸಿಬಲ್, ರಾಹುಲ್ ಗಾಂಧಿ ಆರ್ ಎಸ್ ಎಸ್ ಸಂಘಟನೆಯಾಗಿ ಮಹಾತ್ಮ ಗಾಂಧಿ ಹತ್ಯೆಗೆ ಕಾರಣ ಎಂದಿಲ್ಲ ಬದಲಾಗಿ ಆರ್ ಎಸ್ ಎಸ್ ನ ಜನರನ್ನು ದೂಷಿಸಿದ್ದರು ಆದರೆ ಜನರು ಆರ್ ಎಸ್ ಎಸ್ ಗೆ ಸಂಬಂಧ ಬೆಸೆದಿದ್ದರು ಎಂದು ತಿಳಿಸಿದ್ದರು. ಆದರೆ ಆರ್ ಎಸ್ ಎಸ್ ರಾಹುಲ್ ಗಾಂಧಿ ಅವರಿಂದ ಲಿಖಿತ ಕ್ಷಮಾಪಣೆಗಾಗಿ ಆಗ್ರಹಿಸಿತ್ತು.
ಸ್ವಲ್ಪ ದಿನಗಳ ಹಿಂದೆ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ ತಮ್ಮ ಭಾಷಣದ ತುಣುಕನ್ನು ಪ್ರಕಟಿಸಿ ತಮ್ಮ ಹೇಳಿಕೆಗೆ ಬದ್ಧ ಎಂದಿದ್ದರು ಮತ್ತು ಈಗ ವಿಚಾರಣೆಗೆ ಸಿದ್ಧ ಎಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT