ನವದೆಹಲಿ: ಆಮ್ ಆದ್ಮಿ ಪಕ್ಷದ ಸಾಲು ಸಾಲು ಶಾಸಕರು ಜೈಲು ಪಾಲಾಗುತ್ತಿರುವ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ತಮ್ಮ ಸಂಪುಟದ ಮತ್ತೋರ್ವ ಸಚಿವನನ್ನು ಸಂಪುಟದಿಂದ ವಜಾಗೊಳಿಸಿದ್ದಾರೆ.
ಸಮಾಜ ಕಲ್ಯಾಣ ಸಚಿವ ಸಂದೀಪ್ ಕುಮಾರ್ ಅವರು ಮಹಿಳೆಯರ ಜೊತೆ ಚೆಲ್ಲಾಟವಾಡುತ್ತಿರುವ ಸಿಡಿಯೊಂದು ಬಹಿರಂಗವಾಗುತ್ತಿದ್ದಂತೆ ಸಿಎಂ ಕೇಜ್ರಿವಾಲ್ ಅವರು ಸಂದೀಪ್ ಅವರನ್ನು ಸಂಪುಟದಿಂದ ವಜಾ ಮಾಡಿದ್ದಾರೆ.
ಸಂದೀಪ್ ಅವರು ಮಹಿಳೆಯೋರ್ವಳ ಜೊತೆ ಅಸಭ್ಯ ಭಂಗಿಯಲ್ಲಿರುವ ದೃಶ್ಯಗಳು ಸಿಡಿಯಲ್ಲಿವೆ. ಹೀಗಾಗಿ ಅವರನ್ನು ಸಂಪುಟದಿಂದ ಕೈಬಿಡುವ ತೀರ್ಮಾನವನ್ನು ಆಮ್ ಆದ್ಮಿ ಪಕ್ಷದ ಉನ್ನತ ಮಟ್ಟದ ಸಭೆಯಲ್ಲಿ ಕೈಗೊಳ್ಳಲಾಗಿದೆ. ಹೀಗಾಗಿ ಸಂದೀಪರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ ಎಂದು ಕೇಜ್ರಿವಾಲ್ ಅವರು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.
ಲಂಚ, ನಕಲಿ ಪದವಿ ಪ್ರಮಾಣಪತ್ರ ಸೇರಿದಂತೆ ವಿವಿಧ ಆರೋಪದಡಿ ಈವರೆಗೆ ಮೂವರು ಸಚಿವರನ್ನು ಕೇಜ್ರಿವಾಲ್ ಅವರು ತಮ್ಮ ಸಂಪುಟದಿಂದ ಕೈಬಿಟ್ಟಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos