ನಾಪತ್ತೆಯಾಗಿರುವ ವ್ಯಾಪಾರಿ ಮಹೇಶ್ ಶಾ 
ದೇಶ

13 ಸಾವಿರ ಕೋಟಿ ರು. ಕಪ್ಪುಹಣ ಘೋಷಿಸಿಕೊಂಡಿದ್ದ ಗುಜರಾತ್ ವ್ಯಾಪಾರಿ ನಾಪತ್ತೆ

ಕಳೆದ ಅಕ್ಟೋಬರ್ ನಲ್ಲಿ ದಾಖಲೆಗಳಿಲ್ಲದ ಬರೊಬ್ಬರಿ 13 ಸಾವಿರ ಕೋಟಿ ರುಪಾಯಿ ಕಪ್ಪುಹಣವನ್ನು ಘೋಷಿಸಿಕೊಂಡಿದ್ದ ಅಹಮದಾಬಾದ್...

ಅಹಮದಾಬಾದ್: ಕಳೆದ ಅಕ್ಟೋಬರ್ ನಲ್ಲಿ ದಾಖಲೆಗಳಿಲ್ಲದ ಬರೊಬ್ಬರಿ 13 ಸಾವಿರ ಕೋಟಿ ರುಪಾಯಿ ಕಪ್ಪುಹಣವನ್ನು ಘೋಷಿಸಿಕೊಂಡಿದ್ದ ಅಹಮದಾಬಾದ್ ಮೂಲದ ವ್ಯಾಪಾರಿ  ಮಹೇಶ್ ಶಾ ನಾಪತ್ತೆಯಾಗಿದ್ದಾರೆ.
ಕೇಂದ್ರ ಸರ್ಕಾರದ ಆದಾಯ ಘೋಷಣೆ ಯೋಜನೆ(ಐಡಿಎಸ್)ಯಡಿ ಕಪ್ಪುಹಣವನ್ನು ಘೋಷಿಸಿಕೊಂಡಿದ್ದ ಶಾ ಗಾಗಿ ಆದಾಯ ತೆರಿಗೆ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಘೋಷಿಸಿಕೊಂಡಿದ್ದ ಹಣದ ಪೈಕಿ ಶೇ.25ರಷ್ಟು ಜಮೆ ಮಾಡಲು ವಿಫಲವಾಗಿದ್ದ 45 ವರ್ಷದ ವ್ಯಾಪಾರಿ ಕೆಲವು ದಿನಗಳಿಂದ ನಾಪತ್ತೆಯಾಗಿದ್ದು, ಆದಾಯ ತೆರಿಗೆ ಅಧಿಕಾರಿಗಳು ಈಗಾಗಲೇ ಶಾ ಅವರ ಮನೆ, ಕಚೇರಿ ಹಾಗೂ ಕಪ್ಪು ಹಣ ಘೋಷಿಸಿಕೊಳ್ಳಲು ಸಹಕರಿಸಿದ ಸಿಎ ತೆಹ್ಮುಲ್ ಸೆತ್ನಾ ಅವರ ಮನೆಯಲ್ಲೂ ಶೋಧ ನಡೆಸಿದ್ದಾರೆ. 
ಐಡಿಎಸ್ ಯೋಜನೆಯಡಿ ಕಪ್ಪುಹಣ ಘೋಷಿಸಿಕೊಂಡವರಿಗೆ ತೆರಿಗೆ ಹಣದ ಕಂತನ್ನು ಪಾವತಿಸಿದಾಕ್ಷಣ ಆದಾಯ ತೆರಿಗೆ ಇಲಾಖೆಯ ಕಾನೂನು ಕ್ರಮಗಳಿಂದ ರಕ್ಷಣೆ ಸಿಗುತ್ತದೆ. ಅದರಂತೆ ಕಾಳಧನ ಘೋಷಿಸಿಕೊಂಡಿದ್ದ ಮಹೇಶ್ ಮೊದಲ ಕಂತಿನ ಕೇವಲ 975 ಕೋಟಿ ರುಪಾಯಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿದ್ದಾರೆ. 
ಮಹೇಶ್ ಶಾ ಅಲ್ಪ ತೆರಿಗೆ ಕಟ್ಟುವಲ್ಲಿ ವಿಫಲರಾಗಿದ್ದು ಯಾಕೆ ಎಂದು ಶೋಧ ಕಾರ್ಯದಲ್ಲಿ ತೊಡಗಿದಾಗ ಅಧಿಕಾರಿಗಳಿಗೆ ತಿಳಿದ ವಿಚಾರವೆಂದರೆ. ಉದ್ಯಮಿ ಶಾ ಅಹಮದಾಬಾದ್ ನ ಹಲವು ದೊಡ್ಡ ದೊಡ್ಡ ಕಾಳಧನಿಕರ ಪರವಾಗಿ 13 ಸಾವಿರ ಕೋಟಿ ಕಪ್ಪುಹಣವನ್ನು ಘೋಷಿಸಿಕೊಂಡಿದ್ದ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT