ಡೇವಿಡ್ ಕ್ಯಾಮರಾನ್ 
ದೇಶ

ಸಚಿನ್ ತೆಂಡೂಲ್ಕರ್ ಅವರನ್ನು ಅಪಹರಿಸಬೇಕು: ಡೇವಿಡ್ ಕ್ಯಾಮರಾನ್

ಭಾರತೀಯ ಕ್ರಿಕೆಟ್ ರಂಗದ ಜೀವಂತ ದಂತಕಥೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರನ್ನು ಅಪಹರಿಸಿ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಬ್ಯಾಟಿಂಗ್ ತರಬೇತಿ...

ನವದೆಹಲಿ: ಭಾರತೀಯ ಕ್ರಿಕೆಟ್ ರಂಗದ ಜೀವಂತ ದಂತಕಥೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರನ್ನು ಅಪಹರಿಸಿ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಬ್ಯಾಟಿಂಗ್ ತರಬೇತಿ ಕೊಡಿಸಬೇಕು ಎಂದು ಬ್ರಿಟಿಷ್ ಮಾಜಿ ಪ್ರಧಾನಿ ಡೇವಿಡ್ ಕ್ಯಾಮರಾನ್ ಹಾಸ್ಯಭರಿತ ಸಲಹೆ ನೀಡಿದ್ದಾರೆ. 
ಭಾರತಕ್ಕೆ ಬೇಕಿರುವ ಬದಲಾವಣೆಯ ಸೂತ್ರಗಳು ಎಂಬ ವಿಚಾರ ಕುರಿತು ಮಾತನಾಡುತ್ತಿದ್ದ 50ರ ಹರೆಯದ ಕ್ಯಾಮರಾನ್ ಅವರು, ಭಾರತ ಪ್ರವಾಸದಲ್ಲಿರುವ ಇಂಗ್ಲೆಂಡ್ ತಂಡ ಸದ್ಯದ ಮೂರು ಟೆಸ್ಟ್ ಪಂದ್ಯಗಳ ಪೈಕಿ ಎರಡರಲ್ಲಿ ಸೋತ್ತಿದ್ದು ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ಇಂತಹ ದಯನೀಯ ಸ್ಥಿತಿಯಲ್ಲಿರುವ ತಂಡವನ್ನು ನೋಡಿದರೆ ತಂಡದ ಹೆಚ್ಚಿನ ತರಬೇತಿಗಾಗಿ ಸಚಿನ್ ತೆಂಡೂಲ್ಕರ್ ಅವರನ್ನು ಅಪಹರಿಸುವ ಅಗತ್ಯವಿದೆ ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ. 
ನಾನು ಪ್ರತಿ ಸಾರಿ ಭಾರತಕ್ಕೆ ಬಂದಾಗಲೆಲ್ಲಾ ಇಲ್ಲಿನ ಅಭಿವೃದ್ಧಿ ಮತ್ತು ಸಾಮರ್ಥ್ಯವನ್ನು ಕಾಣುತ್ತೇನೆ. ಭಾರತದೊಂದಿಗೆ ಇಂಗ್ಲೆಂಡ್ ಹೊಂದಿರುವ ಐತಿಹಾಸಿಕ ಬಾಂಧವ್ಯವನ್ನು ಇದೇ ವೇಳೆ ಕ್ಯಾಮರಾನ್ ಹೊಗಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT