ಮಮತಾ ಬ್ಯಾನರ್ಜಿ 
ದೇಶ

ಪ.ಬಂಗಾಳ ರಾಜ್ಯಪಾಲರ ಹೇಳಿಕೆ ದುರದೃಷ್ಟಕರ: ಮಮತಾ ಬ್ಯಾನರ್ಜಿ

ಭಾರತೀಯ ಸೇನೆ ವಿರುದ್ಧ ಯಾವುದೇ ಆರೋಪ ಮಾಡುವಾಗ ಎಲ್ಲರೂ ಎಚ್ಚರಿಕೆಯಿಂದಿರಬೇಕು ಎಂದಿರುವ ಪಶ್ಚಿಮ ಬಂಗಾಳ....

ಕೋಲ್ಕತಾ: ಭಾರತೀಯ ಸೇನೆ ವಿರುದ್ಧ ಯಾವುದೇ ಆರೋಪ ಮಾಡುವಾಗ ಎಲ್ಲರೂ ಎಚ್ಚರಿಕೆಯಿಂದಿರಬೇಕು ಎಂದಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಕೇಶ್ರಿನಾಥ್ ತ್ರಿಪಾಠಿ ಅವರ ಹೇಳಿಕೆ ದುರದೃಷ್ಟಕರ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಹೇಳಿದ್ದಾರೆ.
ರಾಜ್ಯಪಾಲರ ಹೇಳಿಕೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ರಾಜ್ಯಪಾಲರು ಕೇಂದ್ರ ಸರ್ಕಾರದ ಧ್ವನಿಯಲ್ಲಿ ಮಾತನಾಡುತ್ತಿದ್ದಾರೆ. ಅವರು ಕಳೆದ 8 ದಿನಗಳಿಂದ ನಗರದಲ್ಲಿ ಇರಲಿಲ್ಲ ಎಂದು ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಯಾವುದೇ ಹೇಳಿಕೆ ನೀಡುವ ಮುನ್ನ ರಾಜ್ಯಪಾಲರು ವಿವರವಾಗಿ ಪರಿಶೀಲಿಸಬೇಕಿತ್ತು. ಆದರೆ ಹಾಗೆಯೇ ಹೇಳಿಕೆ ನೀಡಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.
ಭಾರತೀಯ ಸೇನೆಯಂತಹ ಜವಾಬ್ದಾರಿ ಸಂಸ್ಥೆಗಳ ವಿರುದ್ಧ ಮಾತನಾಡುವಾಗ ಎಲ್ಲರು ಎಚ್ಚರಿಕೆಯಿಂದಿರಬೇಕು. ಸೇನೆಯ ಗೌರವಕ್ಕೆ ಚ್ಯುತಿ ತರಬೇಡಿ. ಸೇನೆಯ ಹೆಸರಿಗೆ ಮಸಿ ಬಳಿಯಬೇಡಿ" ಎಂದು ಬ್ಯಾನರ್ಜಿ ಮಾಡಿರುವ ಆಪಾದನೆಯ ಬಗ್ಗೆ ಪ್ರಶ್ನಿಸಿದಾಗ ತ್ರಿಪಾಠಿ ಹೇಳಿದ್ದರು.
ರಾಜ್ಯ ಸರ್ಕಾರಕ್ಕೆ ಯಾವುದೇ ಮಾಹಿತಿ ನೀಡದೆ ಟೋಲ್ ಪ್ಲಾಜಾಗಳಲ್ಲಿ ಸೇನೆಯನ್ನು ನಿಯೋಜಿಸಲಾಗಿದೆ ಎಂದು ಆರೋಪಿಸಿ ಮಮತಾ ಬ್ಯಾನರ್ಜಿ ಅವರು ಗುರುವಾರ ರಾತ್ರಿ ತಮ್ಮ ಕಚೇರಿಯಿಂದ ಹೊರಬರದೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದರು. ಇದು ಸಂಸತ್ತಿನಲ್ಲಿಯೂ ಕೋಲಾಹಲಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT