ಅಶ್ರಫ್ ಘನಿ 
ದೇಶ

ಅಫ್ಘಾನಿಸ್ತಾನದ ಅಭಿವೃದ್ಧಿಗೆ ಭಾರತ ಬೇಷರತ್ ಬೆಂಬಲ ನೀಡಿದೆ: ಅಶ್ರಫ್ ಘನಿ

ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ, ಭಾರತ ತಮ್ಮ ದೇಶದ ಅಭಿವೃದ್ಧಿಗೆ ಬೇಷರತ್ ಬೆಂಬಲ ನೀಡಿದೆ ಎಂದು ಹೇಳಿದ್ದಾರೆ.

ಅಮೃತ್ ಸರ: ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ, ಭಾರತ ತಮ್ಮ ದೇಶದ ಅಭಿವೃದ್ಧಿಗೆ ಬೇಷರತ್ ಬೆಂಬಲ ನೀಡಿದೆ ಎಂದು ಹೇಳಿದ್ದಾರೆ. 
ಭಾರತ-ಅಪ್ಘಾನಿಸ್ತಾನ-ಇರಾನ್ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ ಚಾಬಹಾರ್ ಬಂದರು ಯೋಜನೆಯ ಬಗ್ಗೆಯೂ ಮಾತನಾಡಿರುವ ಅಶ್ರಫ್ ಘನಿ, ಚಾಬಹಾರ್ ಬಂದರು ಪ್ರಾದೇಶಿಕ ವಾಣಿಜ್ಯ ವಹಿವಾಟು ಹಾಗೂ ಸಂಪರ್ಕದ ವಿಷಯದಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಹೇಳಿದ್ದಾರೆ. 
ಸಲ್ಮಾ ಜಲಾಶಯ ನಿರ್ಮಾಣಕ್ಕೆ ಭಾರತದ ಕೊಡುಗೆಯನ್ನು ಸ್ಮರಿಸಿರುವ ಅಶ್ರಫ್ ಘನಿ, 2016 ರ ಜೂನ್ ನಲ್ಲಿ ಪ್ರಧಾನಿ ಮೋದಿ ಅಪ್ಘಾನಿಸ್ತಾನ-ಭಾರತ ಸ್ನೇಹದ ಸಂಕೇತವಾಗಿರುವ ಜಲಾಶಯವನ್ನು ಉದ್ಘಾಟಿಸಿದ್ದನ್ನು ನೆನೆದಿದ್ದಾರೆ. ಅಪ್ಘಾನಿಸ್ತಾನದ ಅಭಿವೃದ್ಧಿಗೆ ಭಾರತ ನೀಡುತ್ತಿರುವ ಸಹಕಾರ, ಬೆಂಬಲ ಪಾರದರ್ಶಕವಾಗಿದ್ದು ಯಾವುದೇ ಷರತ್ತುಗಳಿಲ್ಲ ಎಂದು ಅಶ್ರಫ್ ಘನಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!