ಸರ್ತಾಜ್ ಅಜೀಜ್ 
ದೇಶ

ಸುಷ್ಮಾ ಸ್ವರಾಜ್ ಗೆ ಬೊಕೆ ಕಳಿಸಿದ ಪಾಕ್ ಪ್ರತಿನಿಧಿ: ಶೀಘ್ರ ಚೇತರಿಕೆಗೆ ಹಾರೈಕೆ

ಪಂಜಾಬ್ ನ ಅಮೃತ್ ಸರದಲ್ಲಿ ನಡೆಯುತ್ತಿರುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗಿಯಾಗಲು ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನ ಪ್ರಧಾನಿ ಸಲಹೆಗಾರ ಸರ್ತಾಜ್ ಅಜೀಜ್ ಸುಷ್ಮಾ ಸ್ವರಾಜ್ ಅವರಿಗೆ ಪುಷ್ಪಗುಚ್ಛ ಕಳಿಸಿಕೊಟ್ಟಿದ್ದು ಶೀಘ್ರವೇ ಗುಣಮುಖರಾಗುವಂತೆ ಶುಭ ಕೋರಿದ್ದಾರೆ.

ಅಮೃತ್ ಸರ: ಪಂಜಾಬ್ ನ ಅಮೃತ್ ಸರದಲ್ಲಿ ನಡೆಯುತ್ತಿರುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗಿಯಾಗಲು ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನ ಪ್ರಧಾನಿ ಸಲಹೆಗಾರ ಸರ್ತಾಜ್ ಅಜೀಜ್ ಸುಷ್ಮಾ ಸ್ವರಾಜ್ ಅವರಿಗೆ ಪುಷ್ಪಗುಚ್ಛ ಕಳಿಸಿಕೊಟ್ಟಿದ್ದು ಶೀಘ್ರವೇ ಗುಣಮುಖರಾಗುವಂತೆ ಶುಭ ಕೋರಿದ್ದಾರೆ.
ಭಾರತಕ್ಕೆ ಆಗಮಿಸಿದ ಸರ್ತಾಜ್ ಅಜೀಜ್ ಅವರನ್ನು ಪಾಕಿಸ್ತಾನದ ಹೈಕಮಿಷನರ್ ಅಬ್ದುಲ್ ಬಸಿತ್ ಬರಮಾಡಿಕೊಂಡಿದ್ದಾರೆ, ಭಾರತಕ್ಕೆ ಆಗಮಿಸಿದ ಬೆನ್ನಲ್ಲೇ ಪಾಕ್ ಪ್ರತಿನಿಧಿ ಸುಷ್ಮಾ ಸ್ವರಾಜ್ ಅವರಿಗೆ ಪುಷ್ಪಗುಚ್ಛ ಕಳಿಸಿಕೊಟ್ಟು ಶೀಘ್ರವೇ ಅನಾರೋಗ್ಯದಿಂದ ಗುಣಮುಖರಾಗುವಂತೆ ಶುಭ ಕೋರಿದ್ದಾರೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದೆ. 
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸುಷ್ಮಾ ಸ್ವರಾಜ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಾರೋಗ್ಯದ ಕಾರಣ ಸುಷ್ಮಾ ಸ್ವರಾಜ್ ಹಾರ್ಟ್ ಆಫ್ ಏಷ್ಯಾ ಸಮ್ಮೇಳನಕ್ಕೆ ಗೈರು ಹಾಜರಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT