ಜಯಲಲಿತಾ 
ದೇಶ

ತಮಿಳುನಾಡು ಸಿಎಂ ಜಯಲಲಿತಾಗೆ ಹೃದಯ ಸ್ತಂಭನ; ಎಂಐಸಿಯುನಲ್ಲಿ ಚಿಕಿತ್ಸೆ

ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಡಿ.4 ರಂದು ಸಂಜೆ ವೇಳೆಗೆ ಹೃದಯ ಸ್ತಂಭನ ಉಂಟಾಗಿದೆ.

ಚೆನ್ನೈ: ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಡಿ.4 ರಂದು ಸಂಜೆ ವೇಳೆಗೆ ಹೃದಯ ಸ್ತಂಭನ ಉಂಟಾಗಿದೆ.
ಒಂದೆರಡು ತಿಂಗಳಿಂದ ಜಯಲಲಿತಾ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗಷ್ಟೇ ಚೇತರಿಸಿಕೊಳ್ಳುತ್ತಿದ್ದ ಜಯಲಲಿತಾ ಅವರಿಗೆ ಹೃದಯ ಸ್ತಂಭನ ಉಂಟಾಗಿದೆ ಎಂದು ಅಪೋಲೋ ಆಸ್ಪತ್ರೆಯ ಪ್ರಕಟಣೆ ಮೂಲಕ ತಿಳಿದುಬಂದಿದೆ.   
ಆಸ್ಪತ್ರೆ ಸಿಒಒ ವಿಶ್ವನಾಥನ್ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ತಮಿಳುನಾಡು ಸಿಎಂ ಅವರ ಆರೋಗ್ಯದ ಬಗ್ಗೆ ತಜ್ಞರು ನಿಗಾವಹಿಸಿದ್ದಾರೆ ಎಂದು ಹೇಳಿದ್ದಾರೆ. ಜಯಲಲಿತಾ ಅವರ ಅನಾರೋಗ್ಯದ ಬಗ್ಗೆ ಎಐಎಡಿಎಂಕೆ ಸಹ ಹೇಳಿಕೆ ಬಿಡುಗಡೆ ಮಾಡಿದ್ದು ಮೆಡಿಕಲ್ ತೀವ್ರ ನಿಗಾ ಘಟಕದಲ್ಲಿ (ಎಂಐಸಿಯು)ನಲ್ಲಿ  ಜಯಲಲಿತಾ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT