ರಾಷ್ಟ್ರೀಯ ಜನತಾದಳದ ನಾಯಕ ಮನೋಜ್ ಝಾ 
ದೇಶ

ಒಮರ್ ಅಬ್ದುಲ್ಲಾರಂತಹ ಜನರ ಮಾತನ್ನು ಕೇಳುವ ಅಗತ್ಯವಿದೆ: ಆರ್'ಜೆಡಿ

ಕಾಶ್ಮೀರದ ನಿರ್ಮಾಣವಾಗಿರುವ ಹಿಂಸಾಚಾರಕ್ಕೆ ಪಾಕಿಸ್ತಾನವನ್ನು ದೂಷಿಸಬಾರದು ಎಂದು ಹೇಳಿದ್ದ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಬೆನ್ನಿಗೆ ಇದೀಗ ಆರ್'ಜೆಡಿ ನಿಂತಿದ್ದು, ಒಮರ್ ಅಬ್ದುಲ್ಲಾರಂತಹ ಜನರ ಮಾತನ್ನು...

ನವದೆಹಲಿ: ಕಾಶ್ಮೀರದ ನಿರ್ಮಾಣವಾಗಿರುವ ಹಿಂಸಾಚಾರಕ್ಕೆ ಪಾಕಿಸ್ತಾನವನ್ನು ದೂಷಿಸಬಾರದು ಎಂದು ಹೇಳಿದ್ದ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಬೆನ್ನಿಗೆ ಇದೀಗ ಆರ್'ಜೆಡಿ ನಿಂತಿದ್ದು, ಒಮರ್ ಅಬ್ದುಲ್ಲಾರಂತಹ ಜನರ ಮಾತನ್ನು ಕೇಳುವ ಅಗತ್ಯವಿದೆ ಎಂದು ಶನಿವಾರ ಹೇಳಿದೆ.

ಈ ಕುರಿತಂತೆ ಮಾಡನಾಡಿರುವ ರಾಷ್ಟ್ರೀಯ ಜನತಾದಳದ ನಾಯಕ ಮನೋಜ್ ಝಾ ಅವರು, ಒಮರ್ ಅಬ್ದುಲ್ಲಾರಂತಹ ಜನರ ಮಾತನ್ನು ಕೇಳುವ ಅಗತ್ಯವಿದ್ದು, ಅವರ ಮಾತನ್ನು ಅರ್ಥಮಾಡಿಕೊಳ್ಳಬೇಕಿದೆ. ಒಮರ್ ಅಬ್ದುಲ್ಲಾ ಅವರ ಹೇಳಿಕೆಯ ಮೂಲತತ್ವವೇನಿದೆ, ಕಾಶ್ಮೀರ ಸಮಸ್ಯೆ ಕುರಿತು ಮಾತನಾಡುತ್ತಿರಬೇಕು. ಸಮಸ್ಯೆ ಕುರಿತು ಎಲ್ಲರೂ ಒಟ್ಟಾಗಿ ಮಾತುಕತೆ ನಡೆಸಬೇಕಿದೆ ಎಂದು ಹೇಳಿದ್ದಾರೆ. ಕಾಶ್ಮೀರ ಸಮಸ್ಯೆ ಕುರಿತಂತೆ ಮಾತನಾಡುವ ಪ್ರಕ್ರಿಯೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿಯಂತ್ರಣ ಹೇರುತ್ತಿದೆ ಎಂದು ಹೇಳಿದ್ದಾರೆ.

ಕಾಶ್ಮೀರದಲ್ಲಿರುವ ಜನತೆಯೊಂದಿಗೆ ಮಾತುಕತೆಯೇ ನಡೆಸದಿದ್ದರೆ, ಸಮಸ್ಯೆ ಬಗೆಹರಿಯುವುದಾದರೂ ಹೇಗೆ? ಪಾಕಿಸ್ತಾನವೊಂದು ಪಿಡುಗಾಗಿ ಭಾರತಕ್ಕೆ ಅಂಟಿಕೊಂಡಿದ್ದು, ಇದರ ವಿರುದ್ಧ ನಾವು ಹಲವು ವರ್ಷಗಳಿಂದರೂ ಹೋರಾಡುತ್ತಲೇ ಬಂದಿದ್ದೇವೆ. ಸರ್ಕಾರ ಮೊದಲು ಪ್ರಸ್ತುತ ಇರುವ ಸಮಸ್ಯೆ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT