ಸಂಗ್ರಹ ಚಿತ್ರ 
ದೇಶ

ದಾಳಿ ಮಾಡಿ ಆರೋಪಿ ಪರಾರಿ, ನಾಲ್ವರು ಪೊಲೀಸರಿಗೆ ಗಾಯ

ಬಂಧನಕ್ಕೊಳಗಾಗಿದ್ದ ಆರೋಪಿಯೊಬ್ಬ ಪೊಲೀಸರ ಮೇಲೆ ದಾಳಿ ಮಾಡಿ ಜೈಲಿನಿಂದ ಪರಾರಿಯಾಗಿದ್ದು, ದಾಳಿ ವೇಳೆ ನಾಲ್ವರು ಪೊಲೀಸರು ಗಾಯಗೊಂಡಿರುವ ಘಟನೆ...

ಮುಜಾಫರ್ನಗರ: ಬಂಧನಕ್ಕೊಳಗಾಗಿದ್ದ ಆರೋಪಿಯೊಬ್ಬ ಪೊಲೀಸರ ಮೇಲೆ ದಾಳಿ ಮಾಡಿ ಜೈಲಿನಿಂದ ಪರಾರಿಯಾಗಿದ್ದು, ದಾಳಿ ವೇಳೆ ನಾಲ್ವರು ಪೊಲೀಸರು ಗಾಯಗೊಂಡಿರುವ ಘಟನೆ ಶಾಮ್ಲಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ನಡೆದಿದೆ.

ಮಾದಕ ವಸ್ತು ಕಳ್ಳಸಾಗಣೆ ಪ್ರಕರಣವೊಂದರಲ್ಲಿ ಅಲೀಮ್ ಎಂಬ ಆರೋಪಿಯನ್ನು ಪೊಲೀಸರು ಕೆಲ ದಿನಗಳ ಹಿಂದಷ್ಟೇ ಬಂಧನಕ್ಕೊಳಪಡಿಸಿದ್ದರು. ನಿನ್ನೆ ಆತನ ಬೆಂಬಲಿಗರು ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ನಂತರ ಆರೋಪಿಯನ್ನು ಕರೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆಂದು ಪೊಲಿಸ್ ವರಿಷ್ಠಾಧಿಕಾರಿ ಅಜಯ್ಪಾಲ್ ಶರ್ಮಾ ಅವರು ಹೇಳಿದ್ದಾರೆ.

ಸಬ್ ಇನ್ಸ್ ಪೆಕ್ಟರ್ ಆದೇಶ್ ಕುಮಾರ್, ಜಿತೇಂದರ್ ಸಿಂಗ್, ಅರವಿಂದ ಸಿಂಗ್ ಹಾಗೂ ಪೇದೆ ಷಕೀಲ್ ಗಾಯಗೊಂಡ ಪೊಲೀಸರಾಗಿದ್ದಾರೆಂದು ಹೇಳಲಾಗುತ್ತಿದೆ. ಪರಾರಿಯಾಗಿರುವ ಆರೋಪಿಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

'ವಿಬಿ-ಜಿ-ರಾಮ್' ಕಾಯ್ದೆ ವಿರುದ್ಧ ಕಾನೂನು ಸಮರ: ವಿಶೇಷ ಅಧಿವೇಶನ ಕರೆದು ಚರ್ಚೆ- ಸಿಎಂ ಸಿದ್ದರಾಮಯ್ಯ

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

SCROLL FOR NEXT