ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್ಎಸ್ ಬೆಟ್ವಾ (ಸಂಗ್ರಹ ಚಿತ್ರ) 
ದೇಶ

ಸಮತೋಲನ ಕಳೆದುಕೊಂಡ ಯುದ್ಧ ನೌಕೆ: 14 ನಾವಿಕರು ಪ್ರಾಣಾಪಾಯದಿಂದ ಪಾರು, 2 ನಾಪತ್ತೆ

ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್ಎಸ್ ಬೆಟ್ವಾ ಸಮತೋಲನ ಕಳೆದುಕೊಂಡು ಮಗುಚಿರುವ ಘಟನೆಯೊಂದು ಸೋಮವಾರ ನಡೆದಿದೆ...

ಮುಂಬೈ: ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್ಎಸ್ ಬೆಟ್ವಾ ಸಮತೋಲನ ಕಳೆದುಕೊಂಡು ಮಗುಚಿರುವ ಘಟನೆಯೊಂದು ಸೋಮವಾರ ನಡೆದಿದೆ.

ಇಂದು ಮಧ್ಯಾಹ್ನ 1.50ರ ಸುಮಾರಿಗೆ ಘಟನೆ ನಡೆದಿದೆ. ಯುದ್ಧ ನೌಕೆಯಲ್ಲಿ ಸಣ್ಣಪುಟ್ಟ ದುರಸ್ತಿಗಳು ಇದ್ದ ಕಾರಣ ದುರಸ್ಥಿಯನ್ನು ಸರಿಪಡಿಸಿ ಸಮುದ್ರಕ್ಕೆ ಬಿಡಲಾಗಿತ್ತು. ಸಮುದ್ರಕ್ಕೆ ಇಳಿದ ಕೆಲವೇ ನಿಮಿಷಗಳಲ್ಲಿ ಹಡಗು ಕಟ್ಟೆಯ ಬಳಿಯೇ ಬೆಟ್ವಾ ಯುದ್ಧ ನೌಕೆಯ ಸಮತೋಲನವನ್ನು ಕಳೆದುಕೊಂಡು ಒಂದು ಭಾಗಕ್ಕೆ ಸರಿದು ಮಗುಚಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಡಾಕ್ ಬ್ಲಾಕ್ ನಲ್ಲಿ ತಾಂತ್ರಿಕ ದೋಷಗಳು ಕಂಡ ಬಂದ ಹಿನ್ನಲೆಯಲ್ಲಿ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ.

ಯುದ್ಧ ನೌಕೆಯ ಒಂದು ಭಾಗ ಮಗುಚಿದ ಪರಿಣಾಮ ನೌಕೆಯಲ್ಲಿದ್ದ 14 ಮಂದಿ ನಾವಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಇಬ್ಬರು ಯೋಧರು ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿದೆ. ನಾಪತ್ತೆಯಾಗಿರುವ ಯೋಧರಿಗಾಗಿ ಇದೀಗ ಶೋಧ ಕಾರ್ಯ ಮುಂದುವರೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಿಂದೆಂದೂ ಈ ರೀತಿಯ ಘಟನೆಗಳು ನಡೆದಿರಲಿಲ್ಲ. ಈ ರೀತಿಯೆ ಘಟನೆ ನಡೆಸಿರುವುದು ಇದೇ ಮೊದಲಾಗಿದ್ದು, ಘಟನೆ ನಿಜಕ್ಕೂ ಆಘಾತವನ್ನುಂಟು ಮಾಡಿದೆ. ಘಟನೆ ವೇಳೆ ಇಬ್ಬರು ಯೋಧರು ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವ ಯೋಧರಿಗಾಗಿ ಈಜು ತಜ್ಞರು ಶೋಧ ಕಾರ್ಯ ನಡೆಸುತ್ತಿದ್ದಾರೆಂದು ನೌಕಾ ಮುಖ್ಯಸ್ಥ ಪ್ರೊ.ಡಿ.ಕೆ. ಶರ್ಮಾ ಅವರು ತಿಳಿಸಿದ್ದಾರೆ.

ಸ್ವದೇಶಿ ನಿರ್ಮಿತ ನೌಕೆಯಾಗಿರುವ ಬೆಟ್ವಾ ಯುದ್ಧ ನೌಕೆಯು ಎರಡು ಪ್ರಮುಖ ಕಾರ್ಯಾಚರಣೆಗಳಲ್ಲಿ ಬಳಕೆ ಮಾಡಲಾಗಿತ್ತು. ಕ್ಯಾಕ್ಟಸ್ ಮತ್ತು ಸುಕೂನ್ ಎಂಬ ಎರಡು ಪ್ರಮುಖ ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಲಾಗಿತ್ತು. ಬೆಟ್ವಾ ಯುದ್ಧ ನೌಕೆ 3850 ಟನ್ ಭಾರ ಹೊರುವ ಸಾಮರ್ಥ್ಯವನ್ನು ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಂಗ್ಲಾದೇಶ ಚುನಾವಣೆಯಲ್ಲಿ BNP ಭರ್ಜರಿ ಗೆಲುವು: ತಾರಿಕ್ ರೆಹಮಾನ್ ಗೆ ಅಭಿನಂದನೆ ಸಲ್ಲಿಸಿ ಪ್ರಧಾನಿ ಮೋದಿ ಹೇಳಿದ್ದೇನು?

ಬಾಂಗ್ಲಾದೇಶ ಚುನಾವಣೆ: ಸ್ಪಷ್ಟ ಬಹುಮತ ಪಡೆದ BNP, ಇವರೇನಾ ಮುಂದಿನ ಪ್ರಧಾನ ಮಂತ್ರಿ ?

ಮಹಾ ಶಿವರಾತ್ರಿ ಮಹತ್ವ: ಆಧ್ಯಾತ್ಮಿಕ ಶುದ್ಧೀಕರಣ, ಪಾಪಗಳ ನಿವಾರಣೆ; ಕಡ್ಡಾಯವಾಗಿ ಮಾಡಿ ಉಪವಾಸ- ಜಾಗರಣೆ, ಪಂಚಾಕ್ಷರಿ ಮಂತ್ರ ಪಠಣೆ!

ಎಪ್ಸ್ಟೀನ್ ಜೊತೆಗಿನ 'ಸಂಬಂಧ': ಹರ್ದೀಪ್ ಪುರಿ ರಾಜೀನಾಮೆಗೆ ಸಂಸದರ ಒತ್ತಾಯ

Karnataka Budget 2026- ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿ, ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳಿವು...

SCROLL FOR NEXT