ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್ಎಸ್ ಬೆಟ್ವಾ (ಸಂಗ್ರಹ ಚಿತ್ರ) 
ದೇಶ

ಸಮತೋಲನ ಕಳೆದುಕೊಂಡ ಯುದ್ಧ ನೌಕೆ: 14 ನಾವಿಕರು ಪ್ರಾಣಾಪಾಯದಿಂದ ಪಾರು, 2 ನಾಪತ್ತೆ

ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್ಎಸ್ ಬೆಟ್ವಾ ಸಮತೋಲನ ಕಳೆದುಕೊಂಡು ಮಗುಚಿರುವ ಘಟನೆಯೊಂದು ಸೋಮವಾರ ನಡೆದಿದೆ...

ಮುಂಬೈ: ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್ಎಸ್ ಬೆಟ್ವಾ ಸಮತೋಲನ ಕಳೆದುಕೊಂಡು ಮಗುಚಿರುವ ಘಟನೆಯೊಂದು ಸೋಮವಾರ ನಡೆದಿದೆ.

ಇಂದು ಮಧ್ಯಾಹ್ನ 1.50ರ ಸುಮಾರಿಗೆ ಘಟನೆ ನಡೆದಿದೆ. ಯುದ್ಧ ನೌಕೆಯಲ್ಲಿ ಸಣ್ಣಪುಟ್ಟ ದುರಸ್ತಿಗಳು ಇದ್ದ ಕಾರಣ ದುರಸ್ಥಿಯನ್ನು ಸರಿಪಡಿಸಿ ಸಮುದ್ರಕ್ಕೆ ಬಿಡಲಾಗಿತ್ತು. ಸಮುದ್ರಕ್ಕೆ ಇಳಿದ ಕೆಲವೇ ನಿಮಿಷಗಳಲ್ಲಿ ಹಡಗು ಕಟ್ಟೆಯ ಬಳಿಯೇ ಬೆಟ್ವಾ ಯುದ್ಧ ನೌಕೆಯ ಸಮತೋಲನವನ್ನು ಕಳೆದುಕೊಂಡು ಒಂದು ಭಾಗಕ್ಕೆ ಸರಿದು ಮಗುಚಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಡಾಕ್ ಬ್ಲಾಕ್ ನಲ್ಲಿ ತಾಂತ್ರಿಕ ದೋಷಗಳು ಕಂಡ ಬಂದ ಹಿನ್ನಲೆಯಲ್ಲಿ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ.

ಯುದ್ಧ ನೌಕೆಯ ಒಂದು ಭಾಗ ಮಗುಚಿದ ಪರಿಣಾಮ ನೌಕೆಯಲ್ಲಿದ್ದ 14 ಮಂದಿ ನಾವಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಇಬ್ಬರು ಯೋಧರು ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿದೆ. ನಾಪತ್ತೆಯಾಗಿರುವ ಯೋಧರಿಗಾಗಿ ಇದೀಗ ಶೋಧ ಕಾರ್ಯ ಮುಂದುವರೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಿಂದೆಂದೂ ಈ ರೀತಿಯ ಘಟನೆಗಳು ನಡೆದಿರಲಿಲ್ಲ. ಈ ರೀತಿಯೆ ಘಟನೆ ನಡೆಸಿರುವುದು ಇದೇ ಮೊದಲಾಗಿದ್ದು, ಘಟನೆ ನಿಜಕ್ಕೂ ಆಘಾತವನ್ನುಂಟು ಮಾಡಿದೆ. ಘಟನೆ ವೇಳೆ ಇಬ್ಬರು ಯೋಧರು ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವ ಯೋಧರಿಗಾಗಿ ಈಜು ತಜ್ಞರು ಶೋಧ ಕಾರ್ಯ ನಡೆಸುತ್ತಿದ್ದಾರೆಂದು ನೌಕಾ ಮುಖ್ಯಸ್ಥ ಪ್ರೊ.ಡಿ.ಕೆ. ಶರ್ಮಾ ಅವರು ತಿಳಿಸಿದ್ದಾರೆ.

ಸ್ವದೇಶಿ ನಿರ್ಮಿತ ನೌಕೆಯಾಗಿರುವ ಬೆಟ್ವಾ ಯುದ್ಧ ನೌಕೆಯು ಎರಡು ಪ್ರಮುಖ ಕಾರ್ಯಾಚರಣೆಗಳಲ್ಲಿ ಬಳಕೆ ಮಾಡಲಾಗಿತ್ತು. ಕ್ಯಾಕ್ಟಸ್ ಮತ್ತು ಸುಕೂನ್ ಎಂಬ ಎರಡು ಪ್ರಮುಖ ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಲಾಗಿತ್ತು. ಬೆಟ್ವಾ ಯುದ್ಧ ನೌಕೆ 3850 ಟನ್ ಭಾರ ಹೊರುವ ಸಾಮರ್ಥ್ಯವನ್ನು ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT