ಕಾಶ್ಮೀರದಲ್ಲಿ ಬಿಗಿ ಭದ್ರತೆ (ಸಂಗ್ರಹ ಚಿತ್ರ) 
ದೇಶ

ಪ್ರತ್ಯೇಕತಾವಾದಿಗಳ ಪ್ರತಿಭಟನಾ ರ್ಯಾಲಿಗೆ ತಡೆಯೊಡ್ಡಿದ ಸೇನೆ: 144 ಸೆಕ್ಷನ್ ಜಾರಿ!

ಹಿಜ್ಬುಲ್ ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆಯನ್ನು ಮುಂದಿಟ್ಟುಕೊಂಡು ಪ್ರತ್ಯೇಕತಾವಾದಿಗಳು ನಡೆಸಲು ಆಯೋಜಿಸಿದ್ದ ಪ್ರತಿಭಟನಾ ರ್ಯಾಲಿಯನ್ನು ಭದ್ರತಾ ಪಡೆಗಳು ತಡೆದಿದ್ದು, ಶ್ರೀನಗರದಲ್ಲಿ 144 ಸೆಕ್ಷನ್ ಜಾರಿ ಮಾಡುವ ಮೂಲಕ ಪ್ರತ್ಯೇಕತಾವಾದಿಗಳನ್ನು ಗೃಹಬಂಧನದಲ್ಲಿರಿಸಿದ್ದಾರೆ.

ಶ್ರೀನಗರ: ಹಿಜ್ಬುಲ್ ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆಯನ್ನು ಮುಂದಿಟ್ಟುಕೊಂಡು ಪ್ರತ್ಯೇಕತಾವಾದಿಗಳು ನಡೆಸಲು ಆಯೋಜಿಸಿದ್ದ ಪ್ರತಿಭಟನಾ ರ್ಯಾಲಿಯನ್ನು ಭದ್ರತಾ ಪಡೆಗಳು ತಡೆದಿದ್ದು, ಶ್ರೀನಗರದಲ್ಲಿ 144  ಸೆಕ್ಷನ್ ಜಾರಿ ಮಾಡುವ ಮೂಲಕ ಪ್ರತ್ಯೇಕತಾವಾದಿಗಳನ್ನು ಗೃಹಬಂಧನದಲ್ಲಿರಿಸಿದ್ದಾರೆ.

ಹಿಜ್ಬುಲ್ ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆಯಾಗಿ ಬರೊಬ್ಬರಿ 6 ತಿಂಗಳುಗಳೇ ಕಳೆದು ಹೋಗಿದೆ. ವಾನಿ ಹತ್ಯೆ ಬಳಿಕ ಪ್ರಕ್ಷುಬ್ದಗೊಂಡಿದ್ದ ಕಾಶ್ಮೀರ ಕೂಡ ದಿನಗಳದಂತೆ ತಣ್ಣಗಾಗಿದೆ. ಈ ನಡುವೆ ತಮ್ಮ ಬೆಳೆ  ಬೇಯಿಸಿಕೊಳ್ಳಲು ಹಾಗೂ ಕಾಶ್ಮೀರದಲ್ಲಿ ಮಾಯವಾಗುತ್ತಿರುವ ತಮ್ಮ ಅಸ್ತಿತ್ವ ಕಂಡುಕೊಳ್ಳಲು ಹವಣಿಸುತ್ತಿರುವ ಪ್ರತ್ಯೇಕತಾವಾದಿಗಳು ಮತ್ತದೇ ಬುರ್ಹಾನ್ ವಾನಿ ಹತ್ಯೆಯನ್ನು ಖಂಡಿಸಿ ಇಂದು ಪ್ರತಿಭಟನಾ ರ್ಯಾಲಿಗೆ ಕರೆ  ನೀಡಿವೆ. ಆದರೆ ಪ್ರತ್ಯೇಕತಾವಾದಿಗಳ ಈ ಪ್ರಯತ್ನಕ್ಕೆ ಕಾಶ್ಮೀರದ ಪೊಲೀಸ್ ಇಲಾಖೆ ಹಾಗೂ ಸೇನಾಪಡೆಗಳು ತಣ್ಣೀರೆರಚಿದ್ದು, ಶ್ರೀನಗರ ಸೇರಿದಂತೆ ಸೂಕ್ಷ್ಮ ಪ್ರದೇಶಗಳಾದ ಜಮ್ಮು, ಪುಲ್ವಾಮ, ಬುರ್ದ್ವಾನ್ ನಂತಹ ಜಿಲ್ಲೆಗಳಲ್ಲಿ  ನಿಷೇಧಾಜ್ಞೆ ಜಾರಿಮಾಡಿವೆ.

ಆ ಮೂಲಕ ಪ್ರತ್ಯೇಕತಾ ವಾದಿಗಳ ಉದ್ದೇಶಿತ ಪ್ರತಿಭಟನಾ ರ್ಯಾಲಿಗೆ ಬ್ರೇಕ್ ಹಾಕಿವೆ. ಅಂತೆಯೇ ಪ್ರಮುಖ ಪ್ರತ್ಯೇಕತಾವಾದಿ ಮುಖಂಡರಾದ ಸೈಯದ್ ಅಲಿ ಶಾ ಗಿಲಾನಿ, ಮಿರ್ವೈಜ್ ಉಮರ್ ಫಾರೂಕ್, ಮಹಮದ್  ಯಾಸಿನ್ ಮಲ್ಲಿಕ್ ಅವರನ್ನು ಅಘೋಷಿತ ಗೃಹಬಂಧನದಲ್ಲಿರಿಸಲಾಗಿದೆ ಎಂದು ತಿಳಿದುಬಂದಿದೆ. ಈ ಪೈಕಿ ಗಿಲಾನಿ ಅವರನ್ನು ಈ ಹಿಂದೆಯೂ ಗೃಹ ಬಂಧನದಲ್ಲಿರಿಸಲಾಗಿತ್ತು.

ಕಣಿವೆ ರಾಜ್ಯದಲ್ಲಿ ಕುಸಿದ ಪ್ರತ್ಯೇಕತಾವಾದಿಗಳ ಪ್ರಭಾವ
ಇನ್ನು ಬುರ್ಹಾನ್ ವಾನಿ ಹತ್ಯೆ ಬಳಿಕ ನಡೆದ ಹಿಂಸಾಚಾರದಲ್ಲಿ ಪ್ರತ್ಯೇಕತಾವಾದಿಗಳ ಕುಮಕ್ಕು ನೀಡಿದ್ದರು ಎಂಬ ಮಾತುಗಳು ಕೇಳಿಬರುತ್ತಿರುವಂತೆಯೇ ಇತ್ತ ಮತ್ತೆ ಕಾಶ್ಮೀರದ ಶಾಂತಿಗೆ ಭಂಗತರಲು ಮುಖಂಡರು  ಮುಂದಾಗಿದ್ದಾರೆ. ಇದೇ ಕಾರಣಕ್ಕೆ ಇಂದು ಶ್ರೀನಗರದ ಲಾಲ್ ಚೌಕ್ ನಲ್ಲಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದು, ಆದರೆ ಈ ರ್ಯಾಲಿಗೆ ಕಾಶ್ಮೀರದಲ್ಲಿ ಯಾವುದೇ ರೀತಿ ಬೆಂಬಲ ವ್ಯಕ್ತವಾಗಿಲ್ಲ. ಒಂದೆಡೆ ಭದ್ರತಾ ಪಡೆಗಳು  ನಿಷೇಧಾಜ್ಞೆ ಜಾರಿ ಮಾಡುವ ಮೂಲಕ ಪ್ರತ್ಯೇಕತಾವಾದಿಗಳಿಗೆ ಕಡಿವಾಣ ಹಾಕಿದ್ದರೆ, ಮತ್ತೊಂದೆಡೆ ಕಾಶ್ಮೀರ ಜನತೆಯೇ ಪ್ರತಿಭಟನಾ ರ್ಯಾಲಿಯಿಂದ ದೂರು ಉಳಿದಿದ್ದಾರೆ. ಅಂಗಡಿ ಮುಂಗಟ್ಟುಗಳನ್ನು ತೆರೆದು ತಮ್ಮ ದೈನಂದಿನ  ಕಾರ್ಯ ಚಟುವಟಿಕೆಗಳಲ್ಲಿ ತೊಡಗುವ ಮೂಲಕ ಪ್ರತ್ಯೇಕತಾವಾದಿಗಳ ಪ್ರತಿಭಟನಾ ರ್ಯಾಲಿಗೆ ಅಸಮ್ಮತಿ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT