ಕಾಶ್ಮೀರದಲ್ಲಿ ಬಿಗಿ ಭದ್ರತೆ (ಸಂಗ್ರಹ ಚಿತ್ರ) 
ದೇಶ

ಪ್ರತ್ಯೇಕತಾವಾದಿಗಳ ಪ್ರತಿಭಟನಾ ರ್ಯಾಲಿಗೆ ತಡೆಯೊಡ್ಡಿದ ಸೇನೆ: 144 ಸೆಕ್ಷನ್ ಜಾರಿ!

ಹಿಜ್ಬುಲ್ ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆಯನ್ನು ಮುಂದಿಟ್ಟುಕೊಂಡು ಪ್ರತ್ಯೇಕತಾವಾದಿಗಳು ನಡೆಸಲು ಆಯೋಜಿಸಿದ್ದ ಪ್ರತಿಭಟನಾ ರ್ಯಾಲಿಯನ್ನು ಭದ್ರತಾ ಪಡೆಗಳು ತಡೆದಿದ್ದು, ಶ್ರೀನಗರದಲ್ಲಿ 144 ಸೆಕ್ಷನ್ ಜಾರಿ ಮಾಡುವ ಮೂಲಕ ಪ್ರತ್ಯೇಕತಾವಾದಿಗಳನ್ನು ಗೃಹಬಂಧನದಲ್ಲಿರಿಸಿದ್ದಾರೆ.

ಶ್ರೀನಗರ: ಹಿಜ್ಬುಲ್ ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆಯನ್ನು ಮುಂದಿಟ್ಟುಕೊಂಡು ಪ್ರತ್ಯೇಕತಾವಾದಿಗಳು ನಡೆಸಲು ಆಯೋಜಿಸಿದ್ದ ಪ್ರತಿಭಟನಾ ರ್ಯಾಲಿಯನ್ನು ಭದ್ರತಾ ಪಡೆಗಳು ತಡೆದಿದ್ದು, ಶ್ರೀನಗರದಲ್ಲಿ 144  ಸೆಕ್ಷನ್ ಜಾರಿ ಮಾಡುವ ಮೂಲಕ ಪ್ರತ್ಯೇಕತಾವಾದಿಗಳನ್ನು ಗೃಹಬಂಧನದಲ್ಲಿರಿಸಿದ್ದಾರೆ.

ಹಿಜ್ಬುಲ್ ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆಯಾಗಿ ಬರೊಬ್ಬರಿ 6 ತಿಂಗಳುಗಳೇ ಕಳೆದು ಹೋಗಿದೆ. ವಾನಿ ಹತ್ಯೆ ಬಳಿಕ ಪ್ರಕ್ಷುಬ್ದಗೊಂಡಿದ್ದ ಕಾಶ್ಮೀರ ಕೂಡ ದಿನಗಳದಂತೆ ತಣ್ಣಗಾಗಿದೆ. ಈ ನಡುವೆ ತಮ್ಮ ಬೆಳೆ  ಬೇಯಿಸಿಕೊಳ್ಳಲು ಹಾಗೂ ಕಾಶ್ಮೀರದಲ್ಲಿ ಮಾಯವಾಗುತ್ತಿರುವ ತಮ್ಮ ಅಸ್ತಿತ್ವ ಕಂಡುಕೊಳ್ಳಲು ಹವಣಿಸುತ್ತಿರುವ ಪ್ರತ್ಯೇಕತಾವಾದಿಗಳು ಮತ್ತದೇ ಬುರ್ಹಾನ್ ವಾನಿ ಹತ್ಯೆಯನ್ನು ಖಂಡಿಸಿ ಇಂದು ಪ್ರತಿಭಟನಾ ರ್ಯಾಲಿಗೆ ಕರೆ  ನೀಡಿವೆ. ಆದರೆ ಪ್ರತ್ಯೇಕತಾವಾದಿಗಳ ಈ ಪ್ರಯತ್ನಕ್ಕೆ ಕಾಶ್ಮೀರದ ಪೊಲೀಸ್ ಇಲಾಖೆ ಹಾಗೂ ಸೇನಾಪಡೆಗಳು ತಣ್ಣೀರೆರಚಿದ್ದು, ಶ್ರೀನಗರ ಸೇರಿದಂತೆ ಸೂಕ್ಷ್ಮ ಪ್ರದೇಶಗಳಾದ ಜಮ್ಮು, ಪುಲ್ವಾಮ, ಬುರ್ದ್ವಾನ್ ನಂತಹ ಜಿಲ್ಲೆಗಳಲ್ಲಿ  ನಿಷೇಧಾಜ್ಞೆ ಜಾರಿಮಾಡಿವೆ.

ಆ ಮೂಲಕ ಪ್ರತ್ಯೇಕತಾ ವಾದಿಗಳ ಉದ್ದೇಶಿತ ಪ್ರತಿಭಟನಾ ರ್ಯಾಲಿಗೆ ಬ್ರೇಕ್ ಹಾಕಿವೆ. ಅಂತೆಯೇ ಪ್ರಮುಖ ಪ್ರತ್ಯೇಕತಾವಾದಿ ಮುಖಂಡರಾದ ಸೈಯದ್ ಅಲಿ ಶಾ ಗಿಲಾನಿ, ಮಿರ್ವೈಜ್ ಉಮರ್ ಫಾರೂಕ್, ಮಹಮದ್  ಯಾಸಿನ್ ಮಲ್ಲಿಕ್ ಅವರನ್ನು ಅಘೋಷಿತ ಗೃಹಬಂಧನದಲ್ಲಿರಿಸಲಾಗಿದೆ ಎಂದು ತಿಳಿದುಬಂದಿದೆ. ಈ ಪೈಕಿ ಗಿಲಾನಿ ಅವರನ್ನು ಈ ಹಿಂದೆಯೂ ಗೃಹ ಬಂಧನದಲ್ಲಿರಿಸಲಾಗಿತ್ತು.

ಕಣಿವೆ ರಾಜ್ಯದಲ್ಲಿ ಕುಸಿದ ಪ್ರತ್ಯೇಕತಾವಾದಿಗಳ ಪ್ರಭಾವ
ಇನ್ನು ಬುರ್ಹಾನ್ ವಾನಿ ಹತ್ಯೆ ಬಳಿಕ ನಡೆದ ಹಿಂಸಾಚಾರದಲ್ಲಿ ಪ್ರತ್ಯೇಕತಾವಾದಿಗಳ ಕುಮಕ್ಕು ನೀಡಿದ್ದರು ಎಂಬ ಮಾತುಗಳು ಕೇಳಿಬರುತ್ತಿರುವಂತೆಯೇ ಇತ್ತ ಮತ್ತೆ ಕಾಶ್ಮೀರದ ಶಾಂತಿಗೆ ಭಂಗತರಲು ಮುಖಂಡರು  ಮುಂದಾಗಿದ್ದಾರೆ. ಇದೇ ಕಾರಣಕ್ಕೆ ಇಂದು ಶ್ರೀನಗರದ ಲಾಲ್ ಚೌಕ್ ನಲ್ಲಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದು, ಆದರೆ ಈ ರ್ಯಾಲಿಗೆ ಕಾಶ್ಮೀರದಲ್ಲಿ ಯಾವುದೇ ರೀತಿ ಬೆಂಬಲ ವ್ಯಕ್ತವಾಗಿಲ್ಲ. ಒಂದೆಡೆ ಭದ್ರತಾ ಪಡೆಗಳು  ನಿಷೇಧಾಜ್ಞೆ ಜಾರಿ ಮಾಡುವ ಮೂಲಕ ಪ್ರತ್ಯೇಕತಾವಾದಿಗಳಿಗೆ ಕಡಿವಾಣ ಹಾಕಿದ್ದರೆ, ಮತ್ತೊಂದೆಡೆ ಕಾಶ್ಮೀರ ಜನತೆಯೇ ಪ್ರತಿಭಟನಾ ರ್ಯಾಲಿಯಿಂದ ದೂರು ಉಳಿದಿದ್ದಾರೆ. ಅಂಗಡಿ ಮುಂಗಟ್ಟುಗಳನ್ನು ತೆರೆದು ತಮ್ಮ ದೈನಂದಿನ  ಕಾರ್ಯ ಚಟುವಟಿಕೆಗಳಲ್ಲಿ ತೊಡಗುವ ಮೂಲಕ ಪ್ರತ್ಯೇಕತಾವಾದಿಗಳ ಪ್ರತಿಭಟನಾ ರ್ಯಾಲಿಗೆ ಅಸಮ್ಮತಿ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT