ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಮಮತಾ ಬ್ಯಾನರ್ಜಿ ವಿಮಾನ ಹಾರಾಟ ವಿವಾದ: 6 ಪೈಲಟ್ ಗಳು ಅಮಾನತು

ಸಾಕಷ್ಟು ವಿವಾದಕ್ಕೆ ಗುರಿಯಾಗಿದ್ದ ಪಶ್ಚಿಮ ಬಂಗಾಳ ವಿಮಾನ ಹಾರಾಟ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಪೈಲಟ್ ಗಳನ್ನು ಅಮಾನತು ಮಾಡಿರುವುದಾಗಿ ಬುಧವಾರ ತಿಳಿದುಬಂದಿದೆ...

ನವದೆಹಲಿ: ಸಾಕಷ್ಟು ವಿವಾದಕ್ಕೆ ಗುರಿಯಾಗಿದ್ದ ಪಶ್ಚಿಮ ಬಂಗಾಳ ವಿಮಾನ ಹಾರಾಟ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಪೈಲಟ್ ಗಳನ್ನು ಅಮಾನತು ಮಾಡಿರುವುದಾಗಿ ಬುಧವಾರ ತಿಳಿದುಬಂದಿದೆ.

ವಿಮಾನದಲ್ಲಿ ಇಂಧನ ಕಡಿಮೆಯಿದೆ ಎಂದು ತಿಳಿದಿದ್ದರೂ ವಿಮಾನವನ್ನು ಹಾರಿಸಿದ್ದಾರೆಂಬ ಆರೋಪದ ಹಿನ್ನಲೆಯಲ್ಲಿ ಇಂಡಿಗೋ ವಿಮಾನದ 2 ಪೈಲಟ್ ಗಳು ಹಾಗೂ ಏರ್ ಇಂಡಿಯಾ ಮತ್ತು ಸ್ಪೈಸ್ ಜೆಟ್ ನ 4 ಪೈಲಟ್ ಗಳನ್ನು ಅಮಾನತು ಮಾಡಲಾಗಿದ್ದು, ಡಿಜಿಸಿಎ ಕೈಗೊಂಡಿದ್ದ ತನಿಖಾ ವರದಿಯನ್ನು ಅನುಸರಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ನಾಗರಿಕ ವಾಯುಯಾನ ನಿಯಮಗಳ ಪ್ರಕಾರ ತುರ್ತು ಅವತರಣಕ್ಕೆ ಅನುಮತಿ ದೊರಕುವುದಕ್ಕೂ ಮುನ್ನ ಕನಿಷ್ಠ 30 ರಿಂದ 40 ನಿಮಿಷಗಳ ಕಾಲ ಆಗಸದಲ್ಲಿ ಪರಿಭ್ರಣ ನಡೆಸುವುದಕ್ಕೆ ಹಾಗೂ ಅತ್ಯಂತ ಸನಿಹದ ವಿಮಾನ ನಿಲ್ದಾಣದಲ್ಲಿ ಇಳಿಯುವ ವರೆಗಿನ ಅವಧಿಗೆ ಬೇಕಾಗುವಷ್ಟು ಇಂಧನವನ್ನು ವಿಮಾನ ಹೊಂದಿರುವಂತೆ ನೋಡಿಕೊಳ್ಳಬೇಕಾದದ್ದು ಪೈಲಟ್ ಗಳ ಹೊಣೆಗಾರಿಕೆಯಾಗಿರುತ್ತದೆ. ಆದರೆ, ಈ ಪ್ರಕರಣದಲ್ಲಿ ಪೈಲಟ್ ಗಳು ತಮ್ಮ ಹೊಣೆಗಾರಿಕೆಯನ್ನು ಮರೆತಿರುವುದು ಕಂಡುಬಂದಿದ್ದು, ಹೀಗಾಗಿ ಆರು ಮಂದಿ ಪೈಲಟ್ ಗಳಿಗೆ ಪುನರ್ ತರಬೇತಿಯ ಅಗತ್ಯವಿದೆ ಎಂದು ಡಿಜಿಸಿಎ ತನ್ನ ತನಿಖಾ ವರದಿಯಲ್ಲಿ ಹೇಳಿದೆ. ವರದಿಯಂತೆ ತಪ್ಪಿತಸ್ಥರಾಗಿರುವ ಆರು ಮಂದಿ ಪೈಲಟ್ ಗಳನ್ನು ಕರ್ತವ್ಯದಿಂದ ಹಿಂಪಡೆಯಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಮಮತಾ ಬ್ಯಾನರ್ಜಿ ಹಾಗೂ ಇನ್ನಿತರೆ ನಾಯಕರು ಪ್ರಯಾಣಿಸುತ್ತಿದ್ದ ದೆಹಲಿ-ಕೋಲ್ಕತಾ ಇಂಡಿಗೋ ವಿಮಾನದಲ್ಲಿ ಇಂಧನ ಕಡಿಮೆ ಇರುವ ಸಮಯದಲ್ಲಿ ಪೈಲ್ ಮಾಡಿದ್ದ ತುರ್ತು ಅವತರಣ ಕೋರಿಕೆಗೆ ಆದ್ಯತೆ ನೀಡಿರುವುದರ ಹಿಂದೆ ಮಮತಾ ಅವರನ್ನು ಹತ್ಯೆ ಮಾಡುವ ಹುನ್ನಾರವಿತ್ತು ಎಂದು ಈ ಹಿಂದೆ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಸಂಸದರು ಆರೋಪಿಸಿದ್ದರು. ಈ ಪ್ರಕರಣ ಸಂಬಂಧ ಸಂಸತ್ತಿನಲ್ಲಿ ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ಈ ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ನಾಗರೀಕ ವಾಯುಯಾನದ ಸಚಿವರು ಘಟನೆಯನ್ನು ತನಿಖೆಗೆ ಆದೇಶಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT