ನಗದು ರಹಿತ ವಹಿವಾಟು! 
ದೇಶ

ಪ್ರಧಾನಿಯನ್ನು ಬೆಂಬಲಿಸಿದ್ದ ಚಾಯ್ ವಾಲನ ಅಂಗಡಿಯಲ್ಲಿ ಸಂಪೂರ್ಣ ನಗದು ರಹಿತ ವಹಿವಾಟು!

ಪ್ರಧಾನಿ ನರೇಂದ್ರ ಮೋದಿ ಅವರ ನಗದು ರಹಿತ ವಹಿವಾಟು ಯೋಜನೆಯನ್ನು ಅಳವಡಿಸಿಕೊಳ್ಳಲು ಗುಜರಾತ್ ನ ಚಾಯ್ ವಾಲನೊಬ್ಬ ಮುಂದಾಗಿದ್ದಾನೆ.

ವಡೋದರಾ: ಪ್ರಧಾನಿ ನರೇಂದ್ರ ಮೋದಿ ಅವರ ನಗದು ರಹಿತ ವಹಿವಾಟು ಯೋಜನೆಯನ್ನು ಅಳವಡಿಸಿಕೊಳ್ಳಲು ಗುಜರಾತ್ ನ ಚಾಯ್ ವಾಲನೊಬ್ಬ ಮುಂದಾಗಿದ್ದಾನೆ. ಟೀ ಅಂಗಡಿ ನಡೆಸುತ್ತಿರುವ ವಡೋದರಾದ ಕಿರಣ್ ಮಹಿದಾ ಅಂಗಡಿಯಲ್ಲಿ ನಗದು ರಹಿತ ವಹಿವಾಟು ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಮುಂದಾಗಿರುವ ವ್ಯಕ್ತಿ. 
2014 ರ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಉಮೇದುವಾರಿಕೆಗೆ ಸಹಿ ಹಾಕಿದ್ದ ಕಿರಣ್ ಮಹಿದಾ, ತಮ್ಮ ಅಂಗಡಿಯಲ್ಲಿ ಶೀಘ್ರವೇ ಸ್ವೈಪಿಂಗ್ ಮಷಿನ್ ಅಳವಡಿಸಲಿದ್ದಾರೆ. ಕಿರಣ್ ಅವರ ಟೀ ಅಂಗಡಿಗೆ ನಿರಂತರವಾಗಿ ಭೇಟಿ ನೀಡುವ ಗ್ರಾಹಕರು ತಿಂಗಳಿಗೊಮ್ಮೆ ಬಿಲ್ ಪಾವತಿ ಮಾಡುತ್ತಾರೆ. ಇಡೀ ತಿಂಗಳ ಬಿಲ್ ನ್ನು ಒಮ್ಮೆಲೆ ಪಾವತಿ ಮಾಡುವ ಗ್ರಾಹಕರಿಗೆ ನೆರವಾಗಲು ನಗದು ರಹಿತ ವಹಿವಾಟು ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದಾಗಿ ಕಿರಣ್ ತಿಳಿಸಿದ್ದಾರೆ. 
500, 1000 ರೂ ಮುಖಬೆಲೆಯ ನೋಟು ನಿಷೇಧವಾಗುವವರೆಗೂ ನಾನು ನಗದನ್ನೇ ಸ್ವೀಕರಿಸುತ್ತಿದ್ದೆ. ಆದರೆ ಇನ್ನು ಮುಂದಿನ ದಿನಗಳಲ್ಲಿ ನನ್ನ ಅಂಗಡಿಯಲ್ಲಿ ನಗದು ರಹಿತ ವ್ಯವಸ್ಥೆ ಜಾರಿಗೆ ಬರಲಿದೆ, ಇದೇ ಉತ್ತಮ ವ್ಯವಸ್ಥೆ ಎನ್ನುತ್ತಾರೆ ಕಿರಣ್. ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ ನಲ್ಲಿ ಖಾತೆಯನ್ನು ಹೊಂದಿರುವ ಚಾಯ್ ವಾಲನಿಗೆ ಜಿಪಿಆರ್ ಎಸ್ ಸ್ವೈಪ್ ಮಷಿನ್ ದೊರೆಯಲಿದ್ದು, ಈಗಾಗಲೇ ಪೇಟಿಎಂ ಮೂಲಕವೂ ಗ್ರಾಹಕರಿಂದ ಹಣ ಪಡೆಯುತ್ತಿದ್ದಾರೆ. 
2014 ರ ಲೋಕಸಭಾ ಚುನಾವಣೆಗೆ ವಡೋದರಾ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದ ಪ್ರಧಾನಿ ನರೇಂದ್ರ ಮೋದಿ ಉಮೇದುವಾರಿಕೆ ಸಲ್ಲಿಸುವ ವೇಳೆ ವಡೋದರಾ ಕ್ಷೇತ್ರದ ಕಿರಣ್ ಮಹಿದಾ ಅವರಿಂದ ಸಹಿ ಪಡೆದುಕೊಂಡಿದ್ದರು. ಇದನ್ನು ಸ್ಮರಿಸಿರುವ ಕಿರಣ್, ಪ್ರಧಾನಿ ನರೇಂದ್ರ ಮೋದಿ ತಮ್ಮ ಉಮೇದುವಾರಿಕೆ ಪರವಾಗಿ ಸಾಮಾನ್ಯ ಚಾಯ್ ಮಾರಾಟಗಾರನಾಗಿದ್ದ ನನ್ನ ಹಾಗೂ ಅತ್ಯಂತ ಶ್ರೀಮಂತ ರಾಜರ ಕುಟುಂಬದವರಾಗಿದ್ದ ಶುಭಾಂಗಿನಿರಾಜೆ ಗಾಯೆಕ್ ವಾಡ್ ಅವರ ಸಹಿಯನ್ನು ಪಡೆದುಕೊಂಡಿದ್ದರು. ಈಗ ನೋಟು ನಿಷೇಧ ಮಾಡುವ ಮೂಲಕ ಶ್ರೀಮಂತ, ಬಡವರ ನಡುವೆ ಸಮಾನತೆ ಇರುವುದನ್ನು ಸಾಧ್ಯಗೊಳಿಸಲು ಯತ್ನಿಸಿದ್ದಾರೆ, ಇದೊಂದು ಅತ್ಯುತ್ತಮವಾದ ಕ್ರಮ ಎಂದು ಕಿರಣ್ ಮೋದಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT