ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ 
ದೇಶ

ಲೋಕಸಭೆಯಲ್ಲಿ ಮುಂದುವರೆದ ಗದ್ದಲ: ಕೇಂದ್ರದ ವಿರುದ್ಧ ಅಡ್ವಾಣಿ ಅಸಮಾಧಾನ

ಸಂಸತ್ತಿನಲ್ಲಿ ಅಧಿವೇಶನ ಆರಂಭವಾದಾಗಿನಿಂದಲೂ ಸುಗಮವಾಗಿ ಕಲಾಪ ಸಾಗದಿರುವುದಕ್ಕೆ ತೀವ್ರ ಬೇಸರವನ್ನು ವ್ಯಕ್ತಪಡಿಸಿರುವ ಬಿಜೆಪಿ ಹಿರಿಯ ನಾಯಕ ಅಡ್ವಾಣಿಯವರು, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ...

ನವದೆಹಲಿ: ಸಂಸತ್ತಿನಲ್ಲಿ ಅಧಿವೇಶನ ಆರಂಭವಾದಾಗಿನಿಂದಲೂ ಸುಗಮವಾಗಿ ಕಲಾಪ ಸಾಗದಿರುವುದಕ್ಕೆ ತೀವ್ರ ಬೇಸರವನ್ನು ವ್ಯಕ್ತಪಡಿಸಿರುವ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿಯವರು, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ವಿರುದ್ಧ ಗುಡುಗಿದ್ದಾರೆ.

ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರನ್ನುದ್ದೇಶಿಸಿ ಮಾತನಾಡಿರುವ ಅವರು, ಸಂಸತ್ತಿನಲ್ಲಿ ಸುಗಮವಾಗಿ ಕಲಾಪ ಸುಗಮವಾಗಿ ಸಾಗದಿರುವುದಕ್ಕೆ ಸರ್ಕಾರ ಹಾಗೂ ವಿರೋಧ ಪಕ್ಷಗಳು ನೇರಹೊಣೆಯಾಗಿವೆ. ಸುಗಮ ಕಲಾಪ ನಡೆಸಲು ಅಡ್ಡಿಯಾದವರ ವಿರುದ್ಧ ಕಾನೂನಾತ್ಮಕ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಅಲ್ಲದೆ, ಇದೇ ವೇಳೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ವಿರುದ್ಧ ಗುಡುಗಿರುವ ಅವರು, ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿರುವುದಾಗಿ ಮಾಹಿತಿ ತಿಳಿದುಬಂದಿದೆ. ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಕಲಾಪವನ್ನು ಸರಿಯಾಗಿ ನಡೆಸಿಕೊಡುತ್ತಿಲ್ಲ. ಈ ಮಾತನ್ನು ನಾನು ಸಾರ್ವಜನಿಕವಾಗಿ ಹೇಳುತ್ತೇನೆ. ಕಲಾಪ ನಾಶವಾಗುತ್ತಿರುವುದಕ್ಕೆ ಸರ್ಕಾರ ಹಾಗೂ ವಿರೋಧಪಕ್ಷಗಳು ನೇರ ಹೊಣೆಯಾಗಿವೆ. ಕಲಾಪವನ್ನು ನಡೆಸಲು ನಿಮ್ಮಿಂದ ಸಾಧ್ಯವಾಗದಿದ್ದರೆ, ಕಲಾಪವನ್ನೇಕೆ ಮುಂದೂಡುತ್ತೀರಿ. ಅನಿರ್ದಿಷ್ಟಾವಧಿಗೆ ಏಕೆ ಮುಂದೂಡಬಾರದು ಎಂದು ಕೇಳಿದ್ದಾರೆ.

ಸುಗಮ ಕಲಾಪಕ್ಕೆ ಅಡ್ಡಿಯಾದವರ ವಿರುದ್ಧ ಕಾನೂನಾತ್ಮಕ ಕ್ರಮಕೈಗೊಳ್ಳಬೇಕಿದ್ದು, ಹಠಮಾರಿತನದ ವರ್ತನೆ ತೋರುತ್ತಿರುವ ನಾಯಕರ ವೇತನವನ್ನು ಕಡಿತಗೊಳಿಸಬೇಕಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT