ಕೇಂದ್ರ ಸಚಿವ ವೆಂಕಯ್ಯ ನಾಯ್ಡು 
ದೇಶ

ಕಲಾಪ ಗದ್ದಲ: ವಿಪಕ್ಷಗಳಿಗೆ ಏನು ಬೇಕು ಎಂಬುದೇ ನಮಗೆ ಅರ್ಥವಾಗುತ್ತಿಲ್ಲ- ನಾಯ್ಡು

ಸಂಸತ್ತು ಕಲಾಪದಲ್ಲಿ ವಿರೋಧ ಪಕ್ಷಗಳು ತೀವ್ರವಾಗಿ ಗದ್ದಲವನ್ನುಂಟು ಮಾಡುತ್ತಿದ್ದು, ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಚರ್ಚೆ ನಡೆಸಲು ಬಿಡುತ್ತಿಲ್ಲ. ವಿರೋಧ ಪಕ್ಷಗಳಿಗೆ ಏನು ಬೇಕೆಂಬುದು ಅರ್ಥವಾಗುತ್ತಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು...

ನವದೆಹಲಿ: ಸಂಸತ್ತು ಕಲಾಪದಲ್ಲಿ ವಿರೋಧ ಪಕ್ಷಗಳು ತೀವ್ರವಾಗಿ ಗದ್ದಲವನ್ನುಂಟು ಮಾಡುತ್ತಿದ್ದು, ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಚರ್ಚೆ ನಡೆಸಲು ಬಿಡುತ್ತಿಲ್ಲ. ವಿರೋಧ ಪಕ್ಷಗಳಿಗೆ ಏನು ಬೇಕೆಂಬುದು ಅರ್ಥವಾಗುತ್ತಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಬುಧವಾರ ಹೇಳಿದ್ದಾರೆ.

ಸಂಸತ್ತಿನಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಿ 3 ವಾರಗಳು ಕಳೆದಿದ್ದರೂ ಇಂದಿಗೂ ನೋಟು ನಿಷೇಧ ಕುರಿತಂತೆ ವಿರೋಧ ಪಕ್ಷಗಳು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಲೇ ಬಂದಿದ್ದು, ತೀವ್ರ ಗದ್ದಲ ಹಿನ್ನೆಲೆಯಲ್ಲಿ ಒಂದೂ ದಿನ ಕೂಡ ಕಲಾಪ ಸುಗಮವಾಗಿ ಸಾಗಿಲ್ಲ. ಈ ಹಿನ್ನಲೆಯಲ್ಲಿ ಕೇಂದ್ರ ಹಾಗೂ ಸ್ಪೀಕರ್ ಮಹಾಜನ್ ಅವರು ವಿರುದ್ಧ ಗುಡುಗಿದ್ದ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರು, ಕಲಾಪವನ್ನು ನಡೆಸಲು ಸಾಧ್ಯವಾಗದಿದ್ದರೆ, ಪದೇಪದೇ ಕಲಾಪವನ್ನು ಮುಂದೂಡುವ ಬದಲು ಅನಿರ್ದಿಷ್ಟಾವಧಿಗೆ ಮುಂದೂಡಿ ಎಂದು ಹೇಳಿದ್ದರು.

ಅಡ್ವಾಣಿ ಅವರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ವೆಂಕಯ್ಯ ನಾಯ್ಡು ಅವರು, ಪ್ರತೀಯೊಂದು ವಿಚಾರದಲ್ಲೂ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ. ಆದರೆ, ವಿರೋಧ ಪಕ್ಷಗಳು ಚರ್ಚೆ ನಡೆಸಲು ಬಿಡುತ್ತಿಲ್ಲ. ಅಡ್ವಾಣಿಯವರಿಗೆ ಕೋಪ ಬಂದಿದೆ. ಕಲಾಪ ನಡೆಯದಿರುವುದಕ್ಕೆ ನಮಗೂ ಬೇಸರವಿದೆ. ಆದರೆ, ಸಂಸತ್ತು ತನ್ನ ಕೆಲಸ ಮಾಡಲು ವಿರೋಧ ಪಕ್ಷಗಳು ಬಿಡುತ್ತಿಲ್ಲ. ಸಂಸತ್ತಿನಲ್ಲಿ ಚರ್ಚೆ ನಡೆಯಲು ಬಿಡುತ್ತಿಲ್ಲವೇಕೆ ಎಂಬ ಪ್ರಶ್ನೆಯನ್ನು ವಿರೋಧ ಪಕ್ಷದ ನಾಯಕರ ಬಳಿ ಕೇಳಬೇಕಿದೆ ಎಂದು ಹೇಳಿದ್ದಾರೆ.

ಇನ್ನೆಷ್ಟು ದಿನ ಸಂಸತ್ತಿನ ಕಾರ್ಯಗಳಿಗೆ ಅಡ್ಡಿ ಮಾಡುವುದು ಎಂಬುದರ ಬಗ್ಗೆ ವಿರೋಧ ಪಕ್ಷಗಳು ಚಿಂಚನೆ ನಡೆಸಬೇಕಿದೆ. ಚರ್ಚೆ ನಡೆಸಲು ಅವರ ಬಳಿ ಯಾವುದೇ ವಿಷಯಗಳಿಲ್ಲ. ಪ್ರತಿಯೊಂದು ವಿಷಯದ ಕುರಿತು ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ. ಆದರೆ, ಚರ್ಚೆ ನಡೆಸುವುದು ವಿರೋಧ ಪಕ್ಷಗಳಿಗೆ ಬೇಡವಾಗಿದೆ. ಅವರ ತಂತ್ರಗಳೇನು ಎಂಬುದು ನಮಗೆ ಅರ್ಥವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT