ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

ಪಾವತಿ ಸುದ್ದಿ ಪ್ರಸಾರದ ವಿರುದ್ಧ ಮಸೂದೆ: ಚುನಾವಣಾ ಆಯೋಗದ ಮನವಿಗೆ ಬಿಜೆಪಿ ಬೆಂಬಲ

ಪಾವತಿ ಸುದ್ದಿಗಳಿಗೆ ಕಡಿವಾಣ ಹಾಕಲು ಮಸೂದೆಯನ್ನು ರೂಪಿಸುವಂತೆ ಕೇಂದ್ರ ಚುನಾವಣಾ ಆಯೋಗ ಮಾಡಿರುವ ಮನವಿಗೆ ಬಿಜೆಪಿ ಗುರುವಾರ ಬೆಂಬಲವನ್ನು ಸೂಚಿಸಿದೆ...

ನವದೆಹಲಿ: ಪಾವತಿ ಸುದ್ದಿಗಳಿಗೆ ಕಡಿವಾಣ ಹಾಕಲು ಮಸೂದೆಯನ್ನು ರೂಪಿಸುವಂತೆ ಕೇಂದ್ರ ಚುನಾವಣಾ ಆಯೋಗ ಮಾಡಿರುವ ಮನವಿಗೆ ಬಿಜೆಪಿ ಗುರುವಾರ ಬೆಂಬಲವನ್ನು ಸೂಚಿಸಿದೆ.

ಈ ಕುರಿತಂತೆ ಮಾತನಾಡಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು, ಚುನಾವಣೆ ವೇಳೆ ರಾಜಕೀಯ ಉದ್ದೇಶಕ್ಕೆ ಬಳಕೆ ಮಾಡುತ್ತೇವೆಂದು ಹೇಳಿ ಹಣವನ್ನು ದುರ್ಬಳಕೆ ಮಾಡಿಕೊಳ್ಳುವುದು ನಿಜಕ್ಕೂ ಗಂಭೀರವಾಗ ವಿಚಾರ. ಈ ರೀತಿ ಹಣದ ದುರ್ಬಳಕೆಯನ್ನು ಮಾಡಲಾಗುತ್ತದೆ. ಏಕೆಂದರೆ, ರಾಜಕೀಯ ಪಕ್ಷಗಳಿಗೆ ಸಾಕಷ್ಟು ತೆರಿಗೆ ವಿನಾಯಿತಿಗಳಿರುತ್ತವೆ. ಈ ರೀತಿಯ ಪ್ರಕರಣಗಳನ್ನು ತನಿಖೆ ನಡೆಸಬೇಕಾಗಿದೆ. ಪಾವತಿ ಸುದ್ದಿಗಳಿಗೆ ಕಡಿವಾಣ ಹಾಕಲು ಮಸೂದೆಯೊಂದನ್ನು ರೂಪಿಸುವಂತೆ ಚುನಾವಣಾ ಆಯೋಗ ಮಾಡಿರುವ ಮನವಿಗೆ ನಮ್ಮ ಬೆಂಬಲವಿದೆ ಎಂದು ಹೇಳಿದ್ದಾರೆ.

ಪಾವತಿ ಸುದ್ದಿಗಳನ್ನು ಗ್ರಾಹ್ಯ ಅಪರಾಧವನ್ನಾಗಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಬಳಿ ಈ ಹಿಂದೆ ಮನವಿ ಮಾಡಿಕೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

Anchor Anushree Marriage: ರೋಷನ್ ಜೊತೆ ಸಪ್ತಪದಿ ತುಳಿದ ಆ್ಯಂಕರ್ ಅನುಶ್ರೀ

SCROLL FOR NEXT