ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮನ್ 
ದೇಶ

ಭದ್ರತೆ ವಿಡಿಯೋ ಪ್ರಕರಣ; ಭಗವಂತ್ ಮನ್ ಅಮಾನತುಗೊಳಿಸಲು ಸಂಸತ್ ಸಮಿತಿ ಶಿಫಾರಸು

ಸಂಸತ್ತಿನ ಭದ್ರತಾ ವ್ಯವಸ್ಥೆಯನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮನ್ ಅವರನ್ನು ಅಮಾನತಿನಲ್ಲಿಡಲು ಸಂಸತ್ ಸಮಿತಿ ಗುರುವಾರ...

ನವದೆಹಲಿ: ಸಂಸತ್ತಿನ ಭದ್ರತಾ ವ್ಯವಸ್ಥೆಯನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮನ್ ಅವರನ್ನು ಅಮಾನತಿನಲ್ಲಿಡಲು ಸಂಸತ್ ಸಮಿತಿ ಗುರುವಾರ ಶಿಫಾರಸು ಮಾಡಿದೆ ಎಂದು ಮೂಲಗಳಿಂದ ತಿಳಿಬಂದಿದೆ.

ವಿಡಿಯೋ ಕುರಿತಂತೆ ತನಿಖೆ ನಡೆಸಿರುವ ಸಂಸತ್ ಸಮಿತಿ ಮನ್ ಭಗವಂತ್ ಮನ್ ಅವರನ್ನು ಅಮಾನತಿನಲ್ಲಿಡುವಂತೆ ಶಿಫಾರಸು ಮಾಡಿದ್ದು, ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗದಂತೆ ಅಮಾನತುಗೊಳಿಸುವಂತೆ ತಿಳಿಸಿದೆ ಎಂದು ಹೇಳಲಾಗುತ್ತಿದೆ.

ಆಪ್ ಸಂಸದ ಭಗವಂತ್ ಮನ್ ಅವರು ಸಂಸತ್ತಿನ ಭದ್ರತಾತ ವ್ಯವಸ್ಥೆಯನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು. ಈ ಪ್ರಕರಣ ಸಂಸತ್ತಿನಲ್ಲಿ ಸಾಕಷ್ಟು ಕೋಲಾಹಲವನ್ನು ಎಬ್ಬಿಸಿತ್ತು. ಸಾಕಷ್ಟು ವಿರೋಧ ವ್ಯಕ್ತವಾದ ಬಳಿಕ ಭಗವಂತ್ ಮನ್ ಅವರು, ಸಂಸತ್ತಿನಲ್ಲಿ ಬೇಷರತ್ ಕ್ಷಮೆಯಾಚಿಸಿದ್ದರು. ಆದರೆ ಈ ಕ್ಷಮೆಯನ್ನು ಒಪ್ಪದ ಸರ್ವ ಸದಸ್ಯರು ಮನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.

ಸಂಸತ್ ಭದ್ರತಾ ನಿಯಮಗಳನ್ನು ಉಲ್ಲಂಘಿಸಿ ನಡೆಸಿರುವ ಚಿತ್ರೀಕರಣದ ಕುರಿತಂತೆ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಕಿರೀಟ್ ಸೋಮಯ್ಯ ನೇತೃತ್ವದ ಸಮಿತಿ ರಚಿಸಿ ತನಿಖೆ ನಡೆಸಲು ಸೂಚಿಸಿದ್ದರು.

ಇದರಂತೆ ತನಿಖೆ ನಡೆಸಿರುವ ಕಿರೀಟ್ ಸೋಮಯ್ಯ ನೇತೃತ್ವದ ಸಮಿತಿ, ಭಗವಂತ್ ಮನ್ ಅವರನ್ನು ಅಮಾನತಿನಲ್ಲಿಡುವಂತೆ ಶಿಫಾರಸ್ಸು ಮಾಡಿದೆ. ಸಮಿತಿಯ ಶಿಫಾರಸ್ಸಿನಂತೆ ನಾಳೆ ನಡೆಯಲಿರುವ ಕಲಾಪದಲ್ಲಿ ಸಂಸತ್ ನಿರ್ಣಯ ಕೈಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT