ಅಮ್ಮಾ ಕ್ಯಾಂಟೀನ್ ನಲ್ಲಿ ಜಯಲಲಿತಾ 
ದೇಶ

ಜಯಲಲಿತಾ ನಿಧನ ನಂತರ ಅಮ್ಮಾ ಕ್ಯಾಂಟೀನ್ ಬಗ್ಗೆ ಜನತೆ ಆತಂಕ

ತಮಿಳು ನಾಡು ಮುಖ್ಯಮಂತ್ರಿಯಾಗಿ ಜಯಲಲಿತಾ ಅವರು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದರು, ಅದರಲ್ಲಿ ಬಹಳ ಪ್ರಸಿದ್ಧವಾದದ್ದು ಅಮ್ಮಾ ...

ಚೆನ್ನೈ: ತಮಿಳು ನಾಡು ಮುಖ್ಯಮಂತ್ರಿಯಾಗಿ ಜಯಲಲಿತಾ ಅವರು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದರು, ಅದರಲ್ಲಿ ಬಹಳ ಪ್ರಸಿದ್ಧವಾದದ್ದು ಅಮ್ಮಾ ಕ್ಯಾಂಟೀನ್.

ಅಮ್ಮಾ ಕ್ಯಾಂಟೀನ್ ಬಡವರಿಗೆ ಕಡಿಮೆ ಬೆಲೆಗೆ ಬಿಸಿಬಿಸಿ ಆಹಾರ ನೀಡುತ್ತಿತ್ತು. ಜಯಲಲಿತಾ ನೆನಪಿಗಾಗಿ ಈ ಯೋಜನೆ ಮುಂದುವರಿಯಬೇಕಾಗಿದೆ ಎಂದು ಮರೀನಾ ಬೀಚ್ ನಲ್ಲಿರುವ ಜಯಲಲಿತಾ ಸಮಾಧಿ ನೋಡಲು ಬಂದ ಮಂಗೈ ಶಂಕರಿ ಎಂಬಾಕೆ ತಿಳಿಸಿದ್ದಾರೆ.

ಕಳೆದ ವರ್ಷದ ಬಜೆಟ್ ಮಂಡನೆಯಾದ ನಂತರ ಅಮ್ಮಾ ಕ್ಯಾಂಟೀನ್ ಗಳನ್ನು ಆಸ್ಪತ್ರೆ ಗಳ ಆವರಣದಲ್ಲಿ ತೆರೆಯಲಾಗಿತ್ತು, ಇದರಿಂದ ಆಹಾರಕ್ಕಾಗಿ ಅಲೆಯುವ ಬಡವರಿಗೆ ಸಹಾಯವಾಗಿತ್ತು. ಜೊತೆಗೆ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ಮನೆಗಳಿಂದ ಆಹಾರ ತರುವ ತಾಪತ್ರಯ ಇರಲಿಲ್ಲ, ಜೊತೆಗೆ ಹಣವು ಉಳಿತಾಯವಾಗುತ್ತಿತ್ತು ಎಂದು ಮತ್ತೊಬ್ಬ ಮಹಿಳೆ ಧನಲಕ್ಷ್ಮಿ ತಿಳಿಸಿದ್ದಾರೆ,

ವ್ಯಾಪಾರಕ್ಕಾಗಿ ರಸ್ತೆ ರಸ್ತೆ ಸುತ್ತುವ ನಮಗೆ ದೊಡ್ಡ ದೊಡ್ಡ ಹೊಟೇಲ್ ಗಳಿಗೆ ತೆರಳಿ ಹೆಚ್ಚಿನ ಹಣ ಕೊಟ್ಟು ತಿನ್ನಲು ಸಾಧ್ಯವಿಲ್ಲ. ಅಮ್ಮಾ ಕ್ಯಾಂಟೀನ್ ನಮಗೆ ಕಡಿಮೆ ದರದಲ್ಲಿ ಶುಚಿ ರುಚಿಯಾಗಿರುವ ಊಟ ನೀಡುತ್ತಿದೆ ಎಂದು ಹೂವಿನ ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ.

3 ರುಪಾಯಿಗೆ ಎರಡು ಚಪಾತಿ ನೀಡುತ್ತಿದ್ದರು. ಇದರಿಂದ ಕಡಿಮೆ ಬೆಲೆಯಲ್ಲಿ ನಮ್ಮ ಹೊಟ್ಟೆ ತುಂಬುತ್ತಿತ್ತು. ಅಮ್ಮಾ ಇಂದು ನಮ್ಮೊಂದಿಗಿಲ್ಲ. ಹೀಗಾಗಿ ಮುಂದೇನೋ ಎಂಬ ಚಿಂತೆ ಕಾಡುತ್ತಿದೆ ಎಂದು ಗೋವಿಂದಮ್ಮಾಳ್ ಎಂಬಾಕೆ ಆತಂಕ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT