ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಸೇನೆ ನಿಯೋಜನೆ ವಿವಾದ: ಪರಿಕ್ಕರ್ ಪತ್ರಕ್ಕೆ ಮಮತಾ ಅಸಮಾಧಾನ

ಸೇನೆ ನಿಯೋಜನೆ ವಿವಾದ ಕುರಿತಂತೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಬರೆದಿರುವ ಪತ್ರಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ವಿಚಾರ ಸರ್ಕಾರದ ನೀತಿಗೆ ಸಂಬಂಧಿಸಿದ್ದೇ ವಿನಃ ಸೇನೆಗೆ...

ಕೋಲ್ಕತಾ: ಸೇನೆ ನಿಯೋಜನೆ ವಿವಾದ ಕುರಿತಂತೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಬರೆದಿರುವ ಪತ್ರಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ವಿಚಾರ ಸರ್ಕಾರದ ನೀತಿಗೆ ಸಂಬಂಧಿಸಿದ್ದೇ ವಿನಃ ಸೇನೆಗೆ ಸಂಬಂಧಿಸಿದ್ದಾಗಿರಲಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.

ಪರಿಕ್ಕರ್ ಅವರ ಪತ್ರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪತ್ರದಲ್ಲಿ ಬಳಸಿರುವ ಭಾಷೆಯಿಂದ ಬೇಸರವಾಗಿದೆ. ನನ್ನ ಟೀಕೆ ಏನಿದ್ದರೂ ಸರ್ಕಾರದ ನೀತಿಯ ಕುರಿತಂತಾಗಿದ್ದೇ ವಿನಃ ಸೇನೆಯ ಕುರಿತಾಗಿ ಆಗಿರಲಿಲ್ಲ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಟೋಲ್ ಪ್ಲಾಜಾಗಳಲ್ಲಿ ಸೇನೆಯನ್ನು ನಿಯೋಜಿಸಿದ್ದಕ್ಕೆ ತೀವ್ರವಾಗಿ ಕೆಂಡಾಮಂಡಲವಾಗಿದ್ದ ಮಮತಾ ಬ್ಯಾನರ್ಜಿಯವರು ತಮ್ಮ ಕಚೇರಿಯಲ್ಲಿ 36 ಗಂಟೆಗಳ ಕಾಲ ಕುಳಿತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಅಲ್ಲದೆ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದ್ದರು.

ಈ ಹಿನ್ನಲೆಯಲ್ಲಿ ಮಮತಾ ಬ್ಯಾನರ್ಜಿಯವರಿಗೆ ಮನೋಹರ್ ಪರಿಕ್ಕರ್ ಅವರು ಪತ್ರವೊಂದನ್ನು ಬರೆದಿದ್ದರು. ಪತ್ರದಲ್ಲಿ ನಿಮ್ಮಂಥ ಉನ್ನತ ಸ್ಥಾನದಲ್ಲಿರುವ ಅನುಭವಿ ವ್ಯಕ್ತಿಯಿಂದ ಈ ಆರೋಪವನ್ನು ನಿರೀಕ್ಷಿಸಿರಲಿಲ್ಲ. ನಿಮ್ಮ ಆರೋಪಗಳಿಂದ ತುಂಬಾ ನೋವಾಗಿದೆ. ನಿಮ್ಮ ಆರೋಪದಿಂದ ದೇಶದ ಸೇನಾಪಡೆಯ ನೈತಿಕತೆಗೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಸಾರ್ವಜನಿಕ ಜೀವನದಲ್ಲಿ ನಿಮ್ಮಂಥ ಅನುಭವಿ ರಾಜಕಾರಣಿ, ಗೌರವಾನ್ವಿತ ಸ್ಥಾನದಲ್ಲಿರುವ ನಿಮ್ಮಂತವರಿಂದ ಈ ಮಾತುಗಳು ಬರುತ್ತವೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಹೇಳಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT