ಮಂಗೋಲಿಯಾ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ) 
ದೇಶ

ಭಾರತದಿಂದ ಆರ್ಥಿಕ ನೆರವು ಕೇಳಿದ ಮಂಗೋಲಿಯಾ ಮೂರ್ಖತನದ ನಡೆ ಎಂದ ಚೀನಾ

ಭಾರತದಿಂದ ಆರ್ಥಿಕ ನೆರವನ್ನು ಕೇಳಿರುವ ಮಂಗೋಲಿಯಾದ ನಡೆಯ ಬಗ್ಗೆ ಪ್ರತಿಕ್ರಿಯಿಸಿರುವ ಚೀನಾ ಮಾಧ್ಯಮ, ಮಂಗೋಲಿಯಾ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಬೀಜಿಂಗ್: ಭಾರತದಿಂದ ಆರ್ಥಿಕ ನೆರವನ್ನು ಕೇಳಿರುವ ಮಂಗೋಲಿಯಾದ ನಡೆಯ ಬಗ್ಗೆ ಪ್ರತಿಕ್ರಿಯಿಸಿರುವ ಚೀನಾ ಮಾಧ್ಯಮ, ಮಂಗೋಲಿಯಾ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. 
ಮಂಗೋಲಿಯಾದ ನಡೆಯನ್ನು ಮೂರ್ಖತನದ ನಡೆ ಎಂದು ಟೀಕಿಸಿರುವ ಚೀನಾ ಪತ್ರಿಕೆ ಗ್ಲೋಬಲ್ ಟೈಮ್ಸ್, ಚೀನಾ ಹಾಗೂ ರಷ್ಯಾದ ನಡುವೆ ಸಿಲುಕಿಕೊಂಡಿರುವ ಮಂಗೋಲಿಯಾ ತಟಸ್ಥವಾಗಿ ಉಳಿಯಲು ಯತ್ನಿಸುತ್ತಿದ್ದು, ಎರಡೂ ಕಡೆಗಳಿಂದ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಗ್ಲೋಬಲ್ ಟೈಮ್ಸ್ ತನ್ನ ಲೇಖನದಲ್ಲಿ ಹೇಳಿದೆ. 
ನವದೆಹಲಿಯಲ್ಲಿರುವ ಮಂಗೋಲಿಯಾದ ರಾಯಭಾರಿ ಕಚೇರಿ ಅಧಿಕಾರಿ ಮಂಗೋಲಿಯಾ ಎದುರಿಸುತ್ತಿರುವ ಆರ್ಥಿಕ ಸಮಸ್ಯೆಯಿಂದ ಹೊರಬರಲು ನೆರವು ನೀಡಬೇಕೆಂದು ಭಾರತಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಚೀನಾದ ವಿದೇಶಾಂಗ ಇಲಾಖೆ ವಕ್ತಾರ ಲು ಕಾಂಗ್ ನಿರಾಕರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT