ಅಬ್ದುಲ್ ಬಸಿತ್ 
ದೇಶ

ಪಾಕಿಸ್ತಾನ ಭಾರತದೊಂದಿಗೆ ಹಗೆತನ ಬಯಲುಸುವುದಿಲ್ಲ: ಅಬ್ದುಲ್ ಬಸಿತ್

ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಉಭಯ ರಾಷ್ಟ್ರಗಳೂ ಮುಂದಾಗಬೇಕು ಎಂದು ಪಾಕಿಸ್ತಾನದ ಹೈಕಮಿಷನರ್ ಅಬ್ದುಲ್ ಬಸಿತ್ ಕರೆ ನೀಡಿದ್ದಾರೆ.

ನವದೆಹಲಿ: ಭಾರತದೊಂದಿಗೆ ಹಗೆತನ ಸಾಧಿಸಲು ಪಾಕಿಸ್ತಾನ ಬಯಸುವುದಿಲ್ಲ ಎಂದು ಹೇಳಿರುವ ಪಾಕಿಸ್ತಾನದ ಹೈಕಮಿಷನರ್ ಅಬ್ದುಲ್ ಬಸಿತ್, ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಉಭಯ ರಾಷ್ಟ್ರಗಳೂ ಮುಂದಾಗಬೇಕು ಎಂದು ಕರೆ ನೀಡಿದ್ದಾರೆ. 
ಭಾರತ-ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಬ್ದುಲ್ ಬಸಿತ್, ಉಭಯ ರಾಷ್ಟ್ರಗಳ ನಡುವೆ ಗಂಭೀರ ಸಮಸ್ಯೆಗಳಿವೆ, ಅದನ್ನು ಅಲ್ಲಗಳೆಯಲು ಅಥವಾ ದೂರವಿಡಲು ಸಾಧ್ಯವಿಲ್ಲ. ಆದರೆ ದ್ವಿಪಕ್ಷೀಯ ಸಂಬಂಧದ ಹೊಸ ಅಧ್ಯಾಯಕ್ಕೆ ಉಭಯ ರಾಷ್ಟ್ರಗಳೂ ಮುಂದಾಗಬೇಕಿದೆ. ಪಾಕಿಸ್ತಾನ ಭಾರತದೊಂದಿಗೆ ಹಗೆತನವನ್ನು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ. 
ಪಾಕಿಸ್ತಾನ ಸಕಾರಾತ್ಮಕ ಮಾತುಕತೆ ನಡೆಸುವ ಉದ್ದೇಶ ಹೊಂದಿದೆ. ಹಾಗೆಯೇ ಭಾರತ ಸಹ ಇದಕ್ಕೆ ಪೂರಕವಾಗಿ ನಡೆದುಕೊಳ್ಳಬೇಕು ಹಾಗಾದಲ್ಲಿ ಮಾತ್ರವೇ ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಅಧ್ಯಾಯವೊಂದು ಪ್ರಾರಂಭವಾಗಲು ಸಾಧ್ಯ ಎಂದು ಅಬ್ದುಲ್ ಬಸಿತ್ ಅಭಿಪ್ರಾಯಪಟ್ಟಿದ್ದಾರೆ. 
ಸೆಪ್ಟೆಂಬರ್ ತಿಂಗಳಲ್ಲಿ ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಪಾಕಿಸ್ತಾನದ ಭಯೋತ್ಪಾದಕರು 19 ಭಾರತೀಯ ಯೋಧರನ್ನು ಹತ್ಯೆ ಮಾಡಿದ ಬಳಿಕ ಭಾರತ- ಪಾಕ್ ದ್ವಿಪಕ್ಷೀಯ ಸಂಬಂಧ ತೀವ್ರವಾಗಿ ಹದಗೆಟ್ಟಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!