ಅಬ್ದುಲ್ ಬಸಿತ್ 
ದೇಶ

ಪಾಕಿಸ್ತಾನ ಭಾರತದೊಂದಿಗೆ ಹಗೆತನ ಬಯಲುಸುವುದಿಲ್ಲ: ಅಬ್ದುಲ್ ಬಸಿತ್

ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಉಭಯ ರಾಷ್ಟ್ರಗಳೂ ಮುಂದಾಗಬೇಕು ಎಂದು ಪಾಕಿಸ್ತಾನದ ಹೈಕಮಿಷನರ್ ಅಬ್ದುಲ್ ಬಸಿತ್ ಕರೆ ನೀಡಿದ್ದಾರೆ.

ನವದೆಹಲಿ: ಭಾರತದೊಂದಿಗೆ ಹಗೆತನ ಸಾಧಿಸಲು ಪಾಕಿಸ್ತಾನ ಬಯಸುವುದಿಲ್ಲ ಎಂದು ಹೇಳಿರುವ ಪಾಕಿಸ್ತಾನದ ಹೈಕಮಿಷನರ್ ಅಬ್ದುಲ್ ಬಸಿತ್, ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಉಭಯ ರಾಷ್ಟ್ರಗಳೂ ಮುಂದಾಗಬೇಕು ಎಂದು ಕರೆ ನೀಡಿದ್ದಾರೆ. 
ಭಾರತ-ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಬ್ದುಲ್ ಬಸಿತ್, ಉಭಯ ರಾಷ್ಟ್ರಗಳ ನಡುವೆ ಗಂಭೀರ ಸಮಸ್ಯೆಗಳಿವೆ, ಅದನ್ನು ಅಲ್ಲಗಳೆಯಲು ಅಥವಾ ದೂರವಿಡಲು ಸಾಧ್ಯವಿಲ್ಲ. ಆದರೆ ದ್ವಿಪಕ್ಷೀಯ ಸಂಬಂಧದ ಹೊಸ ಅಧ್ಯಾಯಕ್ಕೆ ಉಭಯ ರಾಷ್ಟ್ರಗಳೂ ಮುಂದಾಗಬೇಕಿದೆ. ಪಾಕಿಸ್ತಾನ ಭಾರತದೊಂದಿಗೆ ಹಗೆತನವನ್ನು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ. 
ಪಾಕಿಸ್ತಾನ ಸಕಾರಾತ್ಮಕ ಮಾತುಕತೆ ನಡೆಸುವ ಉದ್ದೇಶ ಹೊಂದಿದೆ. ಹಾಗೆಯೇ ಭಾರತ ಸಹ ಇದಕ್ಕೆ ಪೂರಕವಾಗಿ ನಡೆದುಕೊಳ್ಳಬೇಕು ಹಾಗಾದಲ್ಲಿ ಮಾತ್ರವೇ ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಅಧ್ಯಾಯವೊಂದು ಪ್ರಾರಂಭವಾಗಲು ಸಾಧ್ಯ ಎಂದು ಅಬ್ದುಲ್ ಬಸಿತ್ ಅಭಿಪ್ರಾಯಪಟ್ಟಿದ್ದಾರೆ. 
ಸೆಪ್ಟೆಂಬರ್ ತಿಂಗಳಲ್ಲಿ ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಪಾಕಿಸ್ತಾನದ ಭಯೋತ್ಪಾದಕರು 19 ಭಾರತೀಯ ಯೋಧರನ್ನು ಹತ್ಯೆ ಮಾಡಿದ ಬಳಿಕ ಭಾರತ- ಪಾಕ್ ದ್ವಿಪಕ್ಷೀಯ ಸಂಬಂಧ ತೀವ್ರವಾಗಿ ಹದಗೆಟ್ಟಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel