ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮನ್ 
ದೇಶ

ಭದ್ರತೆ ವಿಡಿಯೋ ಪ್ರಕರಣ: ನಾನು ಯಾವುದೇ ತಪ್ಪು ಮಾಡಿಲ್ಲ - ಭಗವಂತ್ ಮನ್

ನಾನು ಯಾವುದೇ ತಪ್ಪನ್ನು ಮಾಡಿಲ್ಲ, ಸಂಸತ್ತು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಜನರಿಗೆ ತೋರಿಸುವುದಷ್ಟೇ ನನ್ನ ಉದ್ದೇಶವಾಗಿದ್ದ ಎಂದು ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮನ್ ಅವರು...

ನವದೆಹಲಿ: ನಾನು ಯಾವುದೇ ತಪ್ಪನ್ನು ಮಾಡಿಲ್ಲ, ಸಂಸತ್ತು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಜನರಿಗೆ ತೋರಿಸುವುದಷ್ಟೇ ನನ್ನ ಉದ್ದೇಶವಾಗಿದ್ದ ಎಂದು ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮನ್ ಅವರು ಶುಕ್ರವಾರ ಹೇಳಿದ್ದಾರೆ.

ಸಂಸತ್ತಿನ ಭದ್ರತಾ ವ್ಯವಸ್ಥೆಯನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮನ್ ಅವರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಅಮಾನತಿನ ಹಿಂದೆ ರಾಜಕೀಯ ಪಿತೂರಿ ಅಡಲಿದೆ. ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನನ್ನ ಮೇಲೆ ದಾಳಿ ಮಾಡಲಾಗುತ್ತಿದೆ. ನಾನು ತಪ್ಪು ಮಾಡಿದ್ದೇನೆಂದು ನನಗನ್ನಿಸುತ್ತಿಲ್ಲ. ಸಂಸತ್ತು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಜನರಿಗೆ ತೋರಿಸುವುದಷ್ಟೇ ನನ್ನ ಉದ್ದೇಶವಾಗಿದ್ದು ಎಂದು ಹೇಳಿದ್ದಾರೆ.

ನಾನು ತಪ್ಪು ಮಾಡಿದ್ದೇನೆಂದು ಕೆಲವರಿಗೆ ಅನಿಸಿದ್ದೇ ಆದರೆ, ಸ್ಪೀಕರ್ ಗಳ ಎದುರಿನಲ್ಲಿಯೇ ಈಗಾಗಲೇ ನಾನು ಬೇಷರತ್ ಕ್ಷಮೆಯಾಚಿಸಿದ್ದೇನೆ. ಇದೀಗ ಲೋಕಸಭೆಯಿಂದ ನನ್ನನ್ನು ಅಮಾನತು ಮಾಡಲಾಗಿದೆ. ಈ ಬೆಳವಣಿಗೆಯನ್ನು ನೋಡಿದರೆ, ಇದೊಂದು ರಾಜಕೀಯ ಪಿತೂರಿ ಎನಿಸತೊಡಗಿದೆ. ಸಂಸತ್ತಿನಲ್ಲಿ ದಲಿತರು, ರೈತರಿಗೆ ಸಂಬಂಧಿಸಿದ ವಿಚಾರಗಳನ್ನು ಮಾತನಾಡಲು ನಿರ್ಧರಿಸಿದ್ದೆ, ನೋಟು ನಿಷೇಧ ಕುರಿತಂತೆ ಮಾತನಾಡಲು ನಿರ್ಧರಿಸಿದ್ದೆ 15 ಲಕ್ಷ ಜನರನ್ನು ನಾನು ಪ್ರತಿನಿಧಿಸುತ್ತಿದ್ದೇನೆ. ನನ್ನನ್ನೇಕೆ ಗುರಿ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಆಪ್ ಸಂಸದ ಭಗವಂತ್ ಮನ್ ಅವರು ಸಂಸತ್ತಿನ ಭದ್ರತಾತ ವ್ಯವಸ್ಥೆಯನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು. ಈ ಪ್ರಕರಣ ಸಂಸತ್ತಿನಲ್ಲಿ ಸಾಕಷ್ಟು ಕೋಲಾಹಲವನ್ನು ಎಬ್ಬಿಸಿತ್ತು. ಸಾಕಷ್ಟು ವಿರೋಧ ವ್ಯಕ್ತವಾದ ಬಳಿಕ ಭಗವಂತ್ ಮನ್ ಅವರು, ಸಂಸತ್ತಿನಲ್ಲಿ ಬೇಷರತ್ ಕ್ಷಮೆಯಾಚಿಸಿದ್ದರು. ಆದರೆ ಈ ಕ್ಷಮೆಯನ್ನು ಒಪ್ಪದ ಸರ್ವ ಸದಸ್ಯರು ಮನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.

ಸಂಸತ್ ಭದ್ರತಾ ನಿಯಮಗಳನ್ನು ಉಲ್ಲಂಘಿಸಿ ನಡೆಸಿರುವ ಚಿತ್ರೀಕರಣದ ಕುರಿತಂತೆ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಕಿರೀಟ್ ಸೋಮಯ್ಯ ನೇತೃತ್ವದ ಸಮಿತಿ ರಚಿಸಿ ತನಿಖೆ ನಡೆಸಲು ಸೂಚಿಸಿದ್ದರು.

ಇದರಂತೆ ತನಿಖೆ ನಡೆಸಿದ್ದ ಕಿರೀಟ್ ಸೋಮಯ್ಯ ನೇತೃತ್ವದ ಸಮಿತಿ, ಭಗವಂತ್ ಮನ್ ಅವರನ್ನು ಅಮಾನತಿನಲ್ಲಿಡುವಂತೆ ಶಿಫಾರಸ್ಸು ಮಾಡಿತ್ತು. ಸಮಿತಿಯ ಶಿಫಾರಸ್ಸಿನಂತೆ ಇಂದು ನಡೆದ ಸಂಸತ್ ಕಲಾಪದಲ್ಲಿ ನಿರ್ಣಯ ಕೈಗೊಂಡು, ಲೋಕಸಭೆಯಿಂದ ಭಗವಂತ್ ಮನ್ ಅವರನ್ನು ಅಮಾನತು ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT