ನರೇಂದ್ರ ಮೋದಿ 
ದೇಶ

ನೋಟು ನಿಷೇಧದ ಯಜ್ಞದಲ್ಲಿ ಭಾಗಿಯಾದ ಭಾರತೀಯರಿಗೆ ವಂದನೆ: ಪ್ರಧಾನಿ ಮೋದಿ

ಡಿ.8 ಕ್ಕೆ 500, 1000 ರೂ ನೋಟುಗಳ ನಿಷೇಧವಾಗಿ ಒಂದು ತಿಂಗಳು ಕಳೆದಿದ್ದು, ಪ್ರಧಾನಿ ನರೇಂದ್ರ ಮೋದಿ ನೋಟು ನಿಷೇಧದ ಕಾರ್ಯಾಚರಣೆಯನ್ನು ಕಪ್ಪುಹಣ, ಭಯೋತ್ಪಾದನೆಯ ವಿರುದ್ಧದ ಯಜ್ಞದಲ್ಲಿ ಭಾಗಿಯಾಗಿದ್ದಕ್ಕೆ ದೇಶದ ಜನತೆಗೆ ನಮಸ್ಕರಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ನವದೆಹಲಿ: ಡಿ.8 ಕ್ಕೆ 500, 1000 ರೂ ನೋಟುಗಳ ನಿಷೇಧವಾಗಿ ಒಂದು ತಿಂಗಳು ಕಳೆದಿದ್ದು, ಪ್ರಧಾನಿ ನರೇಂದ್ರ ಮೋದಿ ನೋಟು ನಿಷೇಧದ ಕಾರ್ಯಾಚರಣೆಯನ್ನು ಕಪ್ಪುಹಣ, ಭಯೋತ್ಪಾದನೆಯ ವಿರುದ್ಧದ ಯಜ್ಞದಲ್ಲಿ ಭಾಗಿಯಾಗಿದ್ದಕ್ಕೆ  ದೇಶದ ಜನತೆಗೆ ನಮಸ್ಕರಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. 
ಪ್ರತಿಪಕ್ಷಗಳು ನೋಟು ನಿಷೇಧದ ವಿರುದ್ಧ ಪ್ರತಿಭಟನೆಯನ್ನು ಮುಂದುವರೆಸಿದ್ದು, ಡಿ.8 ನ್ನು ಕರಾಳ ದಿನವನ್ನಾಗಿ ಆಚರಿಸಿದ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ನೋಟು ನಿಷೇಧದ ವಿಚಾರದಲ್ಲಿ ಸರ್ಕಾರಕ್ಕೆ ದೇಶದ ಜನತೆಯ ಬೆಂಬಲವಿದೆ ಎಂದು ಹೇಳಿದ್ದರು. ನಂತರ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನೋಟು ನಿಷೇಧದ ಕಾರ್ಯಾಚರಣೆಯನ್ನು ಭಯೋತ್ಪಾದನೆಯ ವಿರುದ್ಧದ ಯಜ್ಞ ಎಂದು ಹೇಳಿದ್ದು, ದೇಶದ ಜನತೆ ಯಜ್ಞದಲ್ಲಿ ಭಾಗವಹಿಸಿದ್ದಾರೆ. ಅವರಿಗೆ ವಂದಿಸುತ್ತೇನೆ, ಇನ್ನು ಮುಂದೆ ಕಪ್ಪುಹಣದ ಕಾರಣದಿಂದಾಗಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಕುಂಠಿತವಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ. 
ಕೇಂದ್ರ ಸರ್ಕಾರದ ನಿರ್ಧಾರ ಕೃಷಿಕರು, ವ್ಯಾಪಾರಿಗಳು ಸೇರಿದಂತೆ ದೇಶದ ಅರ್ಥವ್ಯವಸ್ಥೆಯ ಬೆನ್ನೆಲುಬಾದವರಿಗೆ ಹಲವು ರೀತಿಯಲ್ಲಿ ಉಪಯುಕ್ತವಾಗಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ತಂದೆ-ಮಗನ ವಿರುದ್ಧ ಪ್ರಕರಣ ದಾಖಲು

SCROLL FOR NEXT