ಸಂಗ್ರಹ ಚಿತ್ರ 
ದೇಶ

ಮತ್ತೆ ಪ್ರತಿಭಟನೆಗೆ ಪ್ರತ್ಯೇಕತಾವಾದಿಗಳ ಕರೆ: ಸಂಕಷ್ಟದಲ್ಲಿ ಕಾಶ್ಮೀರ ಜನತೆ

ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಮತ್ತೆ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದು, ಪ್ರತಿಭಟನಾ ಕರೆಯಿಂದಾಗಿ ಕಾಶ್ಮೀರಿಗರು ಸಂಕಷ್ಟದಲ್ಲಿ ಜೀವನ ನಡೆಸುವ...

ಶ್ರೀನಗರ: ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಮತ್ತೆ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದು, ಪ್ರತಿಭಟನಾ ಕರೆಯಿಂದಾಗಿ ಕಾಶ್ಮೀರಿಗರು ಸಂಕಷ್ಟದಲ್ಲಿ ಜೀವನ ನಡೆಸುವ ಪರಿಸ್ಥಿತಿ ಎದುರಾಗಿದೆ.
 
ಪ್ರತ್ಯೇಕತಾವಾದಿಗಳ ಪ್ರತಿಭಟನಾ ಕರೆಯಿಂದಾಗಿ ಕಾಶ್ಮೀರದಾದ್ಯಂತ ವ್ಯಾಪಾರ ವಹಿವಾಟುಗಳು ಸ್ಥಗಿತಗೊಂಡಿದ್ದು, ಸಾಮಾನ್ಯ ಜನರು ಸಂಕಷ್ಟದಲ್ಲಿ ಎದುರಿಸುವಂತಾಗಿದೆ. ಎಂದಿನಂತೆ ಶೈಕ್ಷಣಿಕ ಕ್ಷೇತ್ರಗಳು ಬಂದ್ ಆಗಿದ್ದು, ಸೀಮಿತ ಪ್ರದೇಶಗಳಲ್ಲಿ ಬಸ್ ಸಂಚಾರಿಸುತ್ತಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಜುಲೈ 8 ರಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿಯನ್ನು ಭಾರತೀಯ ಸೇನೆ ಹತ್ಯೆ ಮಾಡಿತ್ತು. ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದರು. ಇದರಂತೆ ಕಾಶ್ಮೀರದಲ್ಲಿ ಕಳೆದ 5 ತಿಂಗಳಿನಿಂದಲೂ ಹಿಂಸಾಚಾರ ಮುಂದುವರೆಯುತ್ತಲೇ ಇದ್ದು, ಬಂದ್, ಪ್ರತಿಭಟನೆಗಳಿಂದಾಗಿ ಕಾಶ್ಮೀರಿಗರು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT