ರಾಹುಲ್ ಗಾಂಧಿ ಮತ್ತು ವೆಂಕಯ್ಯ ನಾಯ್ಡು 
ದೇಶ

ಎಲ್ಲರು ಸಂಸತ್ತಿನಿಂದ ಹೊರಗಿರುವಾಗ ಭೂಕಂಪವಾಗಲಿ: ರಾಹುಲ್ ಕಾಲೆಳೆದ ಬಿಜೆಪಿ ನಾಯಕರು

ಎಲ್ಲರೂ ಸಂಸತ್ತಿನಿಂದ ಹೊರಗಿರುವ ಭೂಕಂಪವಾಗಲಿ ಎಂದು ನಾನು ಬಯಸುತ್ತೇನೆ ಎಂದು ವೆಂಕಯ್ಯ ನಾಯ್ದು ಪ್ರತಿಕ್ರಿಯಿಸಿದ್ದಾರೆ....

ನವದೆಹಲಿ: ನೋಟು ನಿಷೇಧದ ಬಗ್ಗೆ ನಾನು ಸಂಸತ್ತಿನಲ್ಲಿ ಮಾತನಾಡಿದರೇ ಭೂಕಂಪವಾಗುತ್ತದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಹೇಳಿಕೆಗೆ ಹಲವು ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ.

ಎಲ್ಲರೂ ಸಂಸತ್ತಿನಿಂದ ಹೊರಗಿರುವ ಭೂಕಂಪವಾಗಲಿ ಎಂದು ನಾನು ಬಯಸುತ್ತೇನೆ ಎಂದು ವೆಂಕಯ್ಯ ನಾಯ್ದು ಪ್ರತಿಕ್ರಿಯಿಸಿದ್ದಾರೆ. ಕಪ್ಪು ಹಣ ತಡೆಗಟ್ಟುವುದು ತಪ್ಪೇ ಎಂದು ನಾಯ್ಡು ಪ್ರಶ್ನಿಸಿರುವ ಅವರು ಮೋದಿ ಅವರನ್ನು ಪ್ರಶ್ನಿಸುವ ನೈತಿಕತೆ ಕಾಂಗ್ರೆಸ್ ನವರಿಗಿಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಭಾಷಣ ಅವರ ಪಕ್ಷದ ಒಳಗೆ ಭೂಕಂಪನ ಮಾಡುತ್ತದೆಯೇ ಹೊರತು ಹೊರಗಡೆಯಲ್ಲ ಎಂದು ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ಟಾಂಗ್ ನೀಡಿದ್ದಾರೆ.

ನಾವು ರಾಹುಲ್ ಗಾಂಧಿ ಭಾಷಣ ಕೇಳಲು ಇಷ್ಟ ಪಡುತ್ತೇವೆ. ಒಂದು ವೇಳೆ ಅವರಿಗೆ ಮಾತನಾಡು ಆಗದಿದ್ದರೇ ಬರೆದುಕೊಂಡು ಬಂದಿರುವ ಸ್ಕ್ರಿಪ್ಟ್ ಓದಲಿ ಎಂದು ಬಿಜೆಪಿ ಮುಖಂಡ ರವಿಶಂಕರ್ ಪ್ರಸಾದ್ ರಾಹುಲ್ ಗಾಂಧಿ ಕಾಲೆಳೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT