ರಾಹುಲ್ ಗಾಂಧಿ ಮತ್ತು ವೆಂಕಯ್ಯ ನಾಯ್ಡು 
ದೇಶ

ಎಲ್ಲರು ಸಂಸತ್ತಿನಿಂದ ಹೊರಗಿರುವಾಗ ಭೂಕಂಪವಾಗಲಿ: ರಾಹುಲ್ ಕಾಲೆಳೆದ ಬಿಜೆಪಿ ನಾಯಕರು

ಎಲ್ಲರೂ ಸಂಸತ್ತಿನಿಂದ ಹೊರಗಿರುವ ಭೂಕಂಪವಾಗಲಿ ಎಂದು ನಾನು ಬಯಸುತ್ತೇನೆ ಎಂದು ವೆಂಕಯ್ಯ ನಾಯ್ದು ಪ್ರತಿಕ್ರಿಯಿಸಿದ್ದಾರೆ....

ನವದೆಹಲಿ: ನೋಟು ನಿಷೇಧದ ಬಗ್ಗೆ ನಾನು ಸಂಸತ್ತಿನಲ್ಲಿ ಮಾತನಾಡಿದರೇ ಭೂಕಂಪವಾಗುತ್ತದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಹೇಳಿಕೆಗೆ ಹಲವು ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ.

ಎಲ್ಲರೂ ಸಂಸತ್ತಿನಿಂದ ಹೊರಗಿರುವ ಭೂಕಂಪವಾಗಲಿ ಎಂದು ನಾನು ಬಯಸುತ್ತೇನೆ ಎಂದು ವೆಂಕಯ್ಯ ನಾಯ್ದು ಪ್ರತಿಕ್ರಿಯಿಸಿದ್ದಾರೆ. ಕಪ್ಪು ಹಣ ತಡೆಗಟ್ಟುವುದು ತಪ್ಪೇ ಎಂದು ನಾಯ್ಡು ಪ್ರಶ್ನಿಸಿರುವ ಅವರು ಮೋದಿ ಅವರನ್ನು ಪ್ರಶ್ನಿಸುವ ನೈತಿಕತೆ ಕಾಂಗ್ರೆಸ್ ನವರಿಗಿಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಭಾಷಣ ಅವರ ಪಕ್ಷದ ಒಳಗೆ ಭೂಕಂಪನ ಮಾಡುತ್ತದೆಯೇ ಹೊರತು ಹೊರಗಡೆಯಲ್ಲ ಎಂದು ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ಟಾಂಗ್ ನೀಡಿದ್ದಾರೆ.

ನಾವು ರಾಹುಲ್ ಗಾಂಧಿ ಭಾಷಣ ಕೇಳಲು ಇಷ್ಟ ಪಡುತ್ತೇವೆ. ಒಂದು ವೇಳೆ ಅವರಿಗೆ ಮಾತನಾಡು ಆಗದಿದ್ದರೇ ಬರೆದುಕೊಂಡು ಬಂದಿರುವ ಸ್ಕ್ರಿಪ್ಟ್ ಓದಲಿ ಎಂದು ಬಿಜೆಪಿ ಮುಖಂಡ ರವಿಶಂಕರ್ ಪ್ರಸಾದ್ ರಾಹುಲ್ ಗಾಂಧಿ ಕಾಲೆಳೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT