ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ 
ದೇಶ

ಜಯಲಲಿತಾಗೆ ಭಾರತ ರತ್ನ, ಸಂಸತ್'ನಲ್ಲಿ ಕಂಚಿನ ಪ್ರತಿಮೆಗೆ ಶಿಫಾರಸು: ತ.ನಾ ಸಚಿವ ಸಂಪುಟದ ನಿರ್ಣಯ

ಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಹಾಗೂ ಸಂಸತ್ ಭವನದಲ್ಲಿ ಜಯಲಲಿತಾ ಅವರ ಕಂಚಿನ ಪ್ರತಿಮೆಯನ್ನು ಸ್ಫಾಪಿಸಬೇಕೆಂದು...

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಹಾಗೂ ಸಂಸತ್ ಭವನದಲ್ಲಿ ಜಯಲಲಿತಾ ಅವರ ಕಂಚಿನ ಪ್ರತಿಮೆಯನ್ನು ಸ್ಫಾಪಿಸಬೇಕೆಂದು ತಮಿಳುನಾಡು ರಾಜ್ಯ ಸರ್ಕಾರ ಶನಿವಾರ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ.

ಜಯಲಲಿತಾ ಅವರ ನಿಧನದ ಬಳಿಕ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಒ. ಪನ್ನೀರ್ ಸೆಲ್ವಂ ಅವರು ನಿನ್ನೆ ಮೊದಲ ಸಚಿವ ಸಂಪುಟ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು,

ಇದರಲ್ಲಿ ಜಯಲಲಿತಾ ಅವರಿಗೆ ದೇಶದ ಅತ್ಯುನ್ನತ ಪ್ರಶಸ್ತಿ 'ಭಾರತ ರತ್ನ' ನೀಡಬೇಕು, ರಾಜಧಾನಿ ದೆಹಲಿಯ ಸಂಸತ್ ಆವರಣದಲ್ಲಿ ಜಯಲಲಿತಾ ಅವರ ಕಂಚಿನ ಪ್ರತಿಮೆಯನ್ನು ಸ್ಥಾಪಿಸಬೇಕೆಂದು ನಿರ್ಣಯ ಕೈಗೊಳ್ಳಲಾಗಿದೆ.

ಇದಲ್ಲದೆ, ಮರೀನಾ ಬೀಚ್ ನಲ್ಲಿರುವ ಎಂ.ಜಿ. ರಾಮಚಂದ್ರನ್ ಸ್ಮಾರಕದ ಹೆಸರನ್ನು ಡಾ.ಎಂಜಿಆಱ್ ಮತ್ತು ಪುರಚ್ಚಿ ತಲೈವಿ ಸೆಲ್ವಿ ಜಯಲಲಿತಾ ಸ್ಮಾರಕ ಎಂದು ಬದಲಾಯಿಸಬೇಕು. ಸ್ಮಾರಕಕ್ಕಾಗಿ ರು.15 ಕೋಟಿ ವ್ಯಯಿಸಬೇಕೆಂದು ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ. ಈ ಕುರಿತಂತೆ ಸ್ವತಃ ಎಐಎಡಿಎಂಕೆ ಪಕ್ಷ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದೆ.

ಸಂಪುಟ ಸಭೆ ಆರಂಭಕ್ಕೂಮುನ್ನ ಜಯಲಲಿತಾ ಅವರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನವನ್ನು ಆಚರಿಸಲಾಯಿತು. ಜಯಾಲಲಿತಾ ಅವರು ಇದ್ದ ಸಂದರ್ಭದಲ್ಲಿ ಗರಿಷ್ಠ 15 ನಿಮಿಷಗಳ ನಡೆಯುತ್ತಿದ್ದ ಸಂಪುಟ ಸಭೆ ನಿನ್ನೆ 3 ಗಂಟೆಗಳ ಕಾಲ ನಡೆದಿರುವುದು ವಿಶೇಷವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Repo Rate ಶೇ. 5.25 ಯಥಾಸ್ಥಿತಿ ಮುಂದುವರಿಕೆ, GDP ಬೆಳವಣಿಗೆ ಶೇ. 6.7: RBI ವಿತ್ತೀಯ ನೀತಿ ಪ್ರಕಟ

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ: ಅಂತಿಮ ಘಟ್ಟದಲ್ಲಿ ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!

ಶಾಕ್ ಕೊಟ್ಟ ಸರ್ಕಾರ: ಡೈರಿಯೇತರ ಪನೀರ್ ಗೆ ಒಂದು ವರ್ಷದ ನಿಷೇಧ, ವ್ಯಾಪಾರಿಗಳು ಬೇಸ್ತು! ಕಾರಣ ಏನು?

Yemen ಕರಾವಳಿಯಲ್ಲಿ ಭಾರತೀಯ ಧ್ವಜದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ; ಸಮುದ್ರದಲ್ಲಿ ಮುಳುಗಿದ ಹಡಗು, 13 ಮಂದಿ ಭಾರತೀಯರು ಸೇರಿ ಎಲ್ಲಾ 14 ಸಿಬ್ಬಂದಿ ರಕ್ಷಣೆ..!

Hormuz ಜಲಸಂಧಿ ವಿವಾದ: 'ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವೇ ಇಲ್ಲ'; ಯಾರ ಅನುಮತಿ ಬೇಕಿಲ್ಲ ಎಂದ ಅಮೆರಿಕಕ್ಕೆ Iran ತಿರುಗೇಟು..!