ಜಗದ್ಗುರು ಶಂಕರಾಚಾರ್ಯ ಸ್ವಾಮಿ ನರೇಂದ್ರಾನಂದ ಸರಸ್ವತಿ 
ದೇಶ

ಸಂಸತ್ತು ಕಲಾಪಕ್ಕೆ ಅಡ್ಡಿಪಡಿಸುವ ಸಂಸದರ ವೇತನ ಕಡಿತಗೊಳಿಸಿ: ಕಾಶಿ ಶಂಕರಾಚಾರ್ಯ

ಕಾಶಿ ಸುಮೇರು ಪೀಠಾಧೀಶ್ವರ ಜಗದ್ಗುರು ಶಂಕಾರಾಚಾರ್ಯ ಸ್ವಾಮಿ ನರೇಂದ್ರಾನಂದ ಸರಸ್ವತಿಯವರು...

ಥಾಣೆ: ಕಾಶಿ ಸುಮೇರು ಪೀಠಾಧೀಶ್ವರ ಜಗದ್ಗುರು ಶಂಕಾರಾಚಾರ್ಯ ಸ್ವಾಮಿ ನರೇಂದ್ರಾನಂದ ಸರಸ್ವತಿಯವರು ಮುಕ್ತವಾಗಿ ನರೇಂದ್ರ ಮೋದಿ ಸರ್ಕಾರದ ಅಧಿಕ ಮೌಲ್ಯದ ನೋಟುಗಳ ಅಮಾನ್ಯತೆ ಕ್ರಮವನ್ನು ಸ್ವಾಗತಿಸಿದ್ದಾರೆ. ಆದರೆ ಈ ವಿಷಯದಲ್ಲಿ ಸಂಸತ್ತು ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಸಂಸದರ ಬಗ್ಗೆ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಸಂಸತ್ತು ಕಲಾಪಕ್ಕೆ ಅಡ್ಡಿಪಡಿಸುವವರ ವಿರುದ್ಧ ಸರ್ಕಾರ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ, ಅಂತಹ ಸಂಸದರ ವಿರುದ್ಧ ಏಕೆ ಕಾನೂನು ಕ್ರಮ ಕೈಗೊಳ್ಳಬಾರದು ಎಂದು ಸುಮೇರು ಶ್ರೀಗಳು ಪ್ರಶ್ನಿಸಿದ್ದಾರೆ.
ಕಲಾಪಕ್ಕೆ ಅಡ್ಡಿಪಡಿಸುವ ಸಂಸದರಿಗೆ ವೇತನ ನೀಡಬಾರದು. ಅವರಿಗೆ ನೀಡುವ ಭತ್ಯೆಗಳನ್ನು ಆ ಸಮಯಗಳಲ್ಲಿ ಕಡಿತ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇಲ್ಲಿನ ಮನೋರಮ ನಗರದಲ್ಲಿ ನಡೆಯುತ್ತಿರುವ 45 ದಿನಗಳ ಸಿದ್ದೇಶ್ವರ ದೇವಸ್ಥಾನದ ಹವನದ ಸಂದರ್ಭದಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡುವಾಗ ಹೀಗೆ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಮಿಲಿಟರಿ ಕಾರ್ಯಾಚರಣೆ ಮಾಡೋಣ ಎಂದಿದ್ದು ನೀವು': ಡೊನಾಲ್ಡ್ ಟ್ರಂಪ್ ಅಚ್ಚರಿಯ ಹೇಳಿಕೆ, ರಕ್ಷಣಾ ಕಾರ್ಯದರ್ಶಿ ಮೇಲೆಯೇ ಯುದ್ಧದ ಹೊಣೆ ಹೊರಿಸಿದ ಅಮೆರಿಕಾ ಅಧ್ಯಕ್ಷ..!

West Asia war: ಶಾಂತಿ ಸ್ಥಾಪನೆಗೆ ಪಾಕ್ ಮಧ್ಯಸ್ಥಿಕೆ; ಶತ್ರು ರಾಷ್ಟ್ರಕ್ಕೆ ಹೆಚ್ಚಿದ ಜಾಗತಿಕ ಪ್ರಾಮುಖ್ಯತೆ, ಭಾರತಕ್ಕೆ ತೀವ್ರ ಹಿನ್ನಡೆ..?

ಕೊಲಂಬಿಯಾ ಸೇನಾ ವಿಮಾನ ಪತನ: ಕನಿಷ್ಠ 66 ಮಂದಿ ಸಾವು, ಹಲವರಿಗೆ ಗಾಯ-Video

ವಾಯುದಾಳಿ: ಇರಾನ್ ಇಂಧನ ಮೂಲಸೌಕರ್ಯಕ್ಕೆ ಭಾರೀ ಹಾನಿ, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ

ಅಮೆರಿಕಾದ ವ್ಯಾಲೆರೋ ರಿಫೈನರಿಯಲ್ಲಿ ಭೀಕರ ಸ್ಫೋಟ: ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿಯ ಕೆನ್ನಾಲಿಗೆ, ಹೆಚ್ಚಿದ ಆತಂಕ

SCROLL FOR NEXT