ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ
ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಫ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಪತ್ರ ಬರೆದಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ, ಹಗರಣದ ತನಿಖೆಯಲ್ಲಿ ಮಾಜಿ ರಕ್ಷಣಾ ಕಾರ್ಯದರ್ಶಿ ವಿಜಯ್ ಸಿಂಗ್ ಹಾಗೂ ಟಾಟಾ ಸನ್ಸ್ ನ ಹಂಗಾಮಿ ಅಧ್ಯಕ್ಷ ರತನ್ ಟಾಟಾ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಎಎನ್ಐ ವರದಿಯ ಪ್ರಕಾರ ಸಿಬಿಐ ಗೆ ಪತ್ರ ಬರೆದಿರುವ ಸುಬ್ರಹ್ಮಣಿಯನ್ ಸ್ವಾಮಿ, ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದಲ್ಲಿ ರತನ್ ಟಾಟಾ, ವಿಜಯ್ ಸಿಂಗ್ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ರತನ್ ಟಾಟಾ ಮಾಜಿ ರಕ್ಷಣಾ ಕಾರ್ಯದರ್ಶಿ ವಿಜಯ್ ಸಿಂಗ್ ಅವರನ್ನು ಟಾಟಾ ಟ್ರಸ್ಟ್ ಮಂಡಳಿಗೆ ನೇಮಕ ಮಾಡಿದ್ದು ಅಕ್ರಮ ಎಂದು ಆರೋಪಿಸಿರುವ ಸುಬ್ರಹ್ಮಣಿಯನ್ ಸ್ವಾಮಿ, ರತನ್ ಟಾಟಾ ಇಟಾಲಿಗೆ ಹೋಗಿ ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದ ವಿಚಾರಣೆ ಎದುರಿಸಿ ಹೇಳಿಕೆ ನೀಡಿದ್ದರು. ಇದೇ ಆಧಾರದಲ್ಲಿ ರತನ್ ಟಾಟಾ ಅವರ ವಿಚಾರಣೆ ನಡೆಸುವ ಅಗತ್ಯವಿದೆ, ಇಟಾಲಿಯಿಂದ ಬಂದ ಸಮನ್ಸ್ ಗೆ ರತನ್ ಟಾಟಾ ಉತ್ತರಿಸುತ್ತಾರೆ ಎನ್ನುವುದಾದರೆ ಭಾರತದಲ್ಲಿಯೂ ಅವರು ವಿಚಾರಣೆ ಎದುರಿಸಬೇಕು ಎಂದು ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos